ಜೂನ್‌ 2: ರೈತಸಂಘದಿಂದ ಬೃಹತ್‌ ಪ್ರತಿಭಟನೆ

ರಾಕೇಶ್‌ ಟಿಕಾಯತ್‌ ಮೇಲೆ ಹಲ್ಲೆ

ರೈತ ನಾಯಕ ರಾಕೇಶ್‌ ಟಿಕಾಯತ್‌ ಮೇಲೆ ಮಸಿ ಎರಚಿ ಹಲ್ಲೆ ನಡೆದಿದೆ. ಇದನ್ನು ಖಂಡಿಸಿ ಗುರುವಾರ ತೀರ್ಥಹಳ್ಳಿಯ ವಿವಿಧ ಜನಪರ ಸಂಘಟನೆಗಳ ನೇತೃತ್ವದಲ್ಲಿ ತಾಲ್ಲೂಕು ರೈತ ಸಂಘ ಬೃಹತ್‌ ಪ್ರತಿಭಟನೆ ನಡೆಸುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಹಲ್ಲೆ ಖಂಡನಾರ್ಹ. ಆಡಳಿತ ಪಕ್ಷ ಹಾಗೂ ಸರ್ಕಾರಿ ಪ್ರಯೋಜಿತ ದೌರ್ಜನ್ಯ ಇದಾಗಿದೆ. ಕೋಮು ದೌರ್ಜನ್ಯ, ಸುಳ್ಳು ಚರಿತ್ರೆ ಸೃಷ್ಠಿಸುವ ಪ್ರಯತ್ನ ನಡೆಸಲಾಗಿದೆ. ಬುದ್ಧ, ಬಸವ, ಅಂಬೇಡ್ಕರ್, ನಾರಾಯಣ ಗುರು, ಕುವೆಂಪು ಮುಂತಾದ ಮಹಾನ್ ವ್ಯಕ್ತಿಗಳ ಮೇಲೆ ನಿಂದಿಸುವ ಕೆಲಸದಲ್ಲಿ ಧರ್ಮಾಂಧತೆ ಬೆಳೆದಿದೆ. ಇದಕ್ಕೆ ನಿದರ್ಶನವಾಗಿ ರೋಹಿತ್ ಚಕ್ರತೀರ್ಥನೆಂಬ ಅಯೋಗ್ಯನ ನೇತೃತ್ವದಲ್ಲಿ ಪಠ್ಯಪುಸ್ತಕ ಪರಿಶೀಲನ ಸಮಿತಿಯನ್ನು ರಚಿಸಲಾಗಿದೆ ಎಂದು ಆರೋಪಿಸಿದೆ.

ಸರ್ಕಾರಗಳ ಇಂತಹ ದರಿದ್ರ ನಡವಳಿಕೆ ಖಂಡಿಸುವ ಉದ್ದೇಶದಿಂದ ಜೂನ್‌ 2ರ ಗುರುವಾರ ಬೆಳಿಗ್ಗೆ 10:30ಕ್ಕೆ ತೀರ್ಥಹಳ್ಳಿ ತಾಲ್ಲೂಕು ಕಛೇರಿ ಮುಂದೆ ಜನಪರ ಸಂಘಟನೆಗಳ ನೇತೃತ್ದಲ್ಲಿ ರೈತ ಸಂಘ ಬೃಹತ್‌ ಪ್ರತಿಭಟನೆ ನಡೆಸಲಿದೆ ಎಂದು ರೈತ ಸಂಘ ತಿಳಿಸಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post