ಮುಡುಬ ರಾಘವೇಂದ್ರ ಆಸ್ಪತ್ರೆ ಭೇಟಿ
ಆರಗ ಅತ್ಯಾಚಾರ ಯತ್ನ ಪ್ರಕರಣ
ಆರಗ ಸಮೀಪ ನಡೆದಿದೆ ಎನ್ನಲಾದ ಅತ್ಯಾಚಾರ ಯತ್ನ ಪ್ರಕರಣದಲ್ಲಿ ದೌರ್ಜನ್ಯಕ್ಕೆ ಒಳಗಾದ ದಂಪತಿಯನ್ನು ತೀರ್ಥಹಳ್ಳಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಯುವ ಮುಖಂಡ ಮುಡುಬ ರಾಘವೇಂದ್ರ ಭೇಟಿಯಾಗಿ ಸಾಂತ್ವಾನ ಹೇಳಿದರು.
ದೇಶದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ದೌರ್ಜನ್ಯಕ್ಕೆ ಒಳಗಾದವರು ಪ್ರಕರಣ ದಾಖಲಿಸುವ ಪ್ರಯತ್ನ ನಡೆಸಿದರು ಕಾಣದ ಕೈಗಳು ಮುಚ್ಚುವ ಪ್ರಯತ್ನದಲ್ಲಿ ತೊಡಗುತ್ತಿವೆ. ದೌರ್ಜನ್ಯಕ್ಕೆ ಒಳಗಾದವರು ಯಾರೇ ಆಗಿದ್ದರು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ದೌರ್ಜನ್ಯಕ್ಕೆ ಒಳಗಾದವರಿಗೆ ರಕ್ಷಣೆ ಒದಗಿಸುವ ಮೂಲಕ ನ್ಯಾಯ ಒದಗಿಸುವ ಕೆಲಸವನ್ನು ಆಡಳಿತ ಮಾಡಬೇಕು ಎಂದು ಒತ್ತಾಯಿಸಿದರು.
ದೌರ್ಜನ್ಯಕ್ಕೆ ಒಳಗಾಗಿರುವ
ದಂಪತಿಗಳಿಗೆ ಹಣ್ಣುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರು
ಮಂಜುನಾಥ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಯಲ್ಲಪ್ಪ ಮುಂತಾದವರು ಇದ್ದರು.