ಬಸವಾನಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಬಸವಾನಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಸಿಹಿ ಹಂಚಿದ ಶಾಲಾಭಿವೃದ್ದಿ ಸಮಿತಿ, ಗಣ್ಯರು

ಶೈಕ್ಷಣಿಕ‌ ಚಟುವಟಿಕೆ ಮಾಹಿತಿ ನೀಡಿದ ಮುಖ್ಯೋಪಾಧ್ಯಾಯರು

2022-23ರ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮೇ 16 ರಂದು ಬಸವಾನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಶಿಕ್ಷಕರು, ಶಾಲಾಭಿವೃದ್ದಿ ಸಮಿತಿ, ಗ್ರಾಮಸ್ಥರು ವಿದ್ಯಾರ್ಥಿಗಳನ್ನು ಉತ್ಸಾಹದಿಂದ ಬರಮಾಡಿಕೊಂಡರು.

ಮುಖ್ಯ ಅತಿಥಿ ಗ್ರಾಮ ಪಂಚಾಯ್ತಿ ಸದಸ್ಯ ಶ್ರೀದೀಪ ಜಿ.ಎನ್. ಮಕ್ಕಳಿಗೆ ಶುಭ ಕೋರಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಸುಮ ಶೈಕ್ಷಣಿಕ ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು. ಆಟೋಟ ನಂತರ ಒಂದು ವಾರ ಪೂರಕ ಚಟುವಟಿಕೆ, ತಿಂಗಳ ಕೊನೆ ವಾರದಲ್ಲಿ ಹಿಂದಿನ ಸಾಲಿನ ಪಠ್ಯದ ಪುನರಾವರ್ತನೆ ಮಾಡಲಾಗುತ್ತದೆ. ಮುಂದಿನ ತಿಂಗಳಿಂದ ಹೊಸ ಪಠ್ಯ ಪ್ರಾರಂಭ ಎಂದು ಮಾರ್ಗದರ್ಶನ ನೀಡಿದರು.

ಸಭಾಧ್ಯಕ್ಷ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಬಿ.ಕೆ.ಉದಯ ಕುಮಾರ ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಕೋರಿದರು. ವಿದ್ಯಾರ್ಥಿಗಳು ಮುಂಜಾನೆ ಓದುವುದರಿಂದ ಜ್ಞಾನದ ಹೆಚ್ಚುತ್ತದೆ. ಸಹಪಾಠಿಗಳೊಂದಿಗೆ ಶಿಸ್ತು, ಸಂಯಮ ಪಾಲಿಸುವ ಮಕ್ಕಳಿಗೆ ಬಹುಮಾನ ನೀಡುವುದಾಗಿ ತಿಳಿಸಿದರು.

ವೇದಿಕೆಯಲ್ಲಿ ಶಾಲಾಭಿವೃದ್ದಿ ಸಮಿತಿ ಸದಸ್ಯ ಬಿ.ಬಿ. ಭಾರತೀಶ್, ಸುಮಯ್ಯ, ಶಿಕ್ಷಕಿಯರಾದ ಮಮತ ಕುಮಾರಿ, ಅನುರಾದ ಉಪಸ್ಥಿತರಿದ್ದರು.

ತಳಿರು ತೋರಣಗಳಿಂದ ಶೃಂಗರಿಸಿ ಮಕ್ಕಳಿಗೆ ಗುಲಾಬಿ ಹೂವು ಹಾಗೂ ಚಾಕಲೇಟ್ ನೀಡಿ ಶಾಲೆಗೆ ಬರಮಾಡಿಕೊಂಡರು.
ಪ್ರಥಮ ವರ್ಷದ ತರಗತಿಗೆ ಪ್ರವೇಶ ಪಡೆದ ಮಕ್ಕಳಿಂದ ಜೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post