ಮೆಗ್ಗಾನ್ ಆಸ್ಪತ್ರೆ ಮುಂಭಾಗ ಅಹೋರಾತ್ರಿ ಪ್ರತಿಭಟನೆ

ಕುಟುಂಬಸ್ಥರಿಗೆ ನೆರವಾಗಿ ನಿಂತ ಯುವ ಕಾಂಗ್ರೆಸ್ ಮುಖಂಡ ಪೂರ್ಣೇಶ್ ಕೆಳಕೆರೆ ಮತ್ತು ಮಧೂಸೂದನ್ 
ನಿದ್ದೆ ಬಿಟ್ಟು ಅಹೋರಾತ್ರಿ ಪ್ರತಿಭಟಿಸಿದರೂ ಸಿಗದ ಚಿಕಿತ್ಸೆ
ರಕ್ತಸ್ರಾವದಲ್ಲೇ ಸಾವು ಬದುಕಿನ ನಡುವೆ ಹೋರಾಡಿದ ಬಡ ಜೀವ
ಬಡವರಿಗೆ ಸಿಗಲ್ವ ಉಚಿತ, ಗುಣಮಟ್ಟದ ಚಿಕಿತ್ಸೆ
ಅಸ್ಪತ್ರೆಯ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ಯಾ...
ಡ್ಯೂಟಿ ಡಾಕ್ಟರ್ ಇಲ್ಲದೆ ರೋಗಿಗಳು ಪರದಾಟ
ಕಾಂಗ್ರೆಸ್ ಯುವ ಮುಖಂಡ ಪೂರ್ಣೇಶ್ ಕೆಳಕೆರೆ ಆರೋಪ


ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ರಾತ್ರಿ 1 ಗಂಟೆಯಿಂದ ರಕ್ತಸ್ರಾವದಿಂದ ಪರದಾಡಿದ ರೋಗಿಯೊಬ್ಬರಿಗೆ ಸೂಕ್ತ ಚಿಕಿತ್ಸೆ ದೊರಕಲಿಲ್ಲ. ಡ್ಯೂಟಿ ಡಾಕ್ಟರ್ ಅಟೆಂಡ್ ಮಾಡುವ ಬದಲು ವಿದ್ಯಾರ್ಥಿಗಳಿಗೆ ಆ ಕೆಲಸ ವಹಿಸಿಕೊಡಲಾಗಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಮುಖಂಡರಾದ ಪೂರ್ಣೇಶ್ ಕೆಳಕೆರೆ ಮತ್ತು ಮಧೂಸೂಧನ್ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.






ನೆಲದ ಧ್ವನಿ

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post