ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕೊಂಡ್ಲೂರು ಸರ್ಕಾರಿ ಪ್ರೌಢಶಾಲೆಯ ಉತ್ತಮ ಸಾಧನೆ

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಗ್ರಾಮಾಂತರ ಪ್ರದೇಶದಲ್ಲಿರುವ ತೀರ್ಥಹಳ್ಳಿ ತಾಲೂಕಿನ ಕೊಂಡ್ಲೂರು ಸರ್ಕಾರಿ ಪ್ರೌಢ ಶಾಲೆ ಉತ್ತಮ ಸಾಧನೆ ಮಾಡಿದೆ. ಮೂಲಭೂತ ಸೌಕರ್ಯ ಕೊರತೆ ನಡುವೆಯೂ ಕು. ದೀಕ್ಷಾ ಹೆಚ್.ವಿ. 625 ಅಂಕಗಳಿಗೆ ಒಟ್ಟು 620 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾಳೆ. 
ಶಾಲೆಯಲ್ಲಿ ಪರೀಕ್ಷೆಗೆ ಕುಳಿತ 30 ಮಂದಿ ವಿದ್ಯಾರ್ಥಿಗಳಲ್ಲಿ 13 ಮಂದಿ ಡಿಸ್ಟಿಂಕ್ಷನ್ ನಲ್ಲಿ, 12 ಮಂದಿ ಪ್ರಥಮ ದರ್ಜೆಯಲ್ಲಿ, 4 ದ್ವೀತಿಯ ದರ್ಜೆ ಉತ್ತೀರ್ಣರಾಗಿದ್ದಾರೆ. ಒಟ್ಟಾರೆಯಾಗಿ ಶೇ. 97 ಫಲಿತಾಂಶ ಬಂದಿದೆ. 
ಸೃಷ್ಟಿ ಜೆ.ಎಸ್. 618

ಮಾನ್ಯ ಜಿ.ಎಸ್. 613
ಕಾವ್ಯ ಎಂ.ಎಸ್. 600,
ಶ್ರೀ ಲಕ್ಷ್ಮಿ ಎಂ.ಎಚ್. 610 ಉತ್ತಮ ಸಾಧನೆಯನ್ನು ಮಾಡಿರುವ ಇವರನ್ನು ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲೆಯ, ಪೋಷಕರನ್ನು ಮತ್ತು ಶಿಕ್ಷಕರನ್ನು, ಅಡುಗೆ ಸಿಬ್ಬಂದಿಯವರನ್ನು  ಶಾಲಾಭಿವೃದ್ದಿ ಸಮಿತಿ  ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಮುಖ್ಯೋಪಾಧ್ಯಾಯರಾದ ಗಿರಿರಾಜ್ ಅವರು ಅಭಿನಂದಿಸಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post