ಮುಂಜಾನೆ ಮೈಕ್ ಮೂಲಕ ಅಜಾನ್ ಕೂಗದಿರಲು ಮುಸ್ಲಿಂ ಮುಖಂಡರ ನಿರ್ಧಾರ

ಮುಂಜಾನೆ 5 ಕ್ಕೆ ಮೈಕ್ ಮೂಲಕ ಅಜಾನ್ ಕೂಗದಿರಲು ಮುಸ್ಲಿಂ ಮುಖಂಡರ ತೀರ್ಮಾನ

ಸುಪ್ರೀಂ ಕೋರ್ಟ್ ಆದೇಶ ಪಾಲನೆಗೆ ಬದ್ಧ

ರಾಜ್ಯದ ಎಲ್ಲ ಮಸೀದಿಗಳಿಗೂ ಈ ನಿರ್ಧಾರ ಅನ್ವಯ
ರಾಜ್ಯದ ಎಲ್ಲ ಮಸೀದಿಗಳಲ್ಲೂ ಮುಂಜಾನೆ
5 ಗಂಟೆಗೆ ಮೈಕ್ ಮೂಲಕ ಅಜಾನ್ ಕೂಗದಿರಲು ಮುಸ್ಲಿಂ ಧರ್ಮ ಗುರುಗಳು, ಮೌಲ್ವಿಗಳು, ಮತ್ತು ಮುಖಂಡರುಗಳ ಸಭೆ ನಿರ್ಧರಿಸಿದೆ. ಸುಪ್ರೀಂ ಕೋರ್ಟ್ ಇತ್ತೀಚಿಗೆ ಹೊರಡಿಸಿರುವ ಆದೇಶ ಪಾಲನೆಗಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸಭೆ ತಿಳಿಸಿದೆ.
ಶರಿಯತ್-ಎ -ಹಿಂದ್ ಸಂಘಟನೆ ಈ ವಿಚಾರದ ಕುರಿತು ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಈ ಕುರಿತು ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ ಎಂದು ಈ ಸಂಘಟನೆ ಅಮೀರ್ -ಎ -ಶರಿಯತ್ ಆಗಿರುವ ಮೌಲಾನ ಸಗೀರ್ ಅಹಮದ್ ಹೇಳಿದ್ದಾರೆ. ಅವರ ಅಧ್ಯಕ್ಷತೆ ಯಲ್ಲಿ ಕಳೆದ ಶನಿವಾರ ಈ ಸಭೆ ನಡೆದಿದೆ.
ಈ ನಿರ್ಧಾರ ರಾಜ್ಯದ ಎಲ್ಲ ಮಸೀದಿಗಳಿಗೂ ಅನ್ವಯ ಆಗಲಿದೆ ಎಲ್ಲರೂ ಒಪ್ಪಿಗೆ ನೀಡಿದ್ದಾರೆ. ಇನ್ನು ಮುಂದೆ ಬೆಳಿಗ್ಗೆ 5ಕ್ಕೆ ಅಜಾನ್ ಕೂಗುವುದಿಲ್ಲ ಉಳಿದ ಸಮಯದಲ್ಲಿ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಮಾರ್ಗ ಸೂಚಿ ಪ್ರಕಾರವೇ ನಡೆದುಕೊಳ್ಳಲಾಗುವುದು ಮುಸ್ಲಿಂರು ಕಾನೂನಿಗೆ ಬೆಲೆ ಕೊಡುವುದಿಲ್ಲ ಎಂದು ಅಪಪ್ರಚಾರ ಮಾಡಲಾಗಿದೆ ಆದರೆ ಈ ನೆಲದ ಕಾನೂನಿಗೆ ಮುಸ್ಲಿಂರು ಅಪಾರ ಗೌರವ ನೀಡುತ್ತಾರೆ ಎಂದು ಉಮರ್ ಷರೀಫ್ ಹೇಳಿದ್ದಾರೆ.
ಬೆಳಿಗ್ಗೆ 5ಕ್ಕೆ ಅಜಾನ್ ಕೂಗುವುದು ಪ್ರಾರ್ಥನೆ ಅಲ್ಲ ಅದು ಪ್ರಾರ್ಥನೆಗೆ ನೀಡುವ ಕರೆ. ಅಜಾನ್ ಗೆ ಸುಪ್ರೀಂ ಕೋರ್ಟ್ ಅಥವಾ ಸರ್ಕಾರ ಅಸಮ್ಮತಿ ಸೂಚಿಸಿಲ್ಲ ಪ್ರಾರ್ಥನೆಗೆ ಮೈಕ್ ಮೂಲಕ ಕರೆ ನೀಡುವುದು ಅನಿವಾರ್ಯ ಅದನ್ನು ಬೆಳಿಗ್ಗೆ 6ರ ನಂತರ ಸರ್ಕಾರದ ಮಾರ್ಗ ಸೂಚಿ ಪ್ರಕಾರವೇ ಮಾಡಲಾಸಗುವುದು ಎಂದು ರಾಜ್ಯ ವಖ್ಫ್ ಮಂಡಳಿ ಅಧ್ಯಕ್ಷ ಮಹಮ್ಮದ್ ಶಫಿ ಸಾ ಹೇಳಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post