ಕಾಡುಕೋಣ ತಿವಿತ ಮಾಸುವ ಮುನ್ನ ಹುಲಿ ದಾಳಿ

ವ್ಯಾಘ್ರನ ಬಾಯಿಗೆ ಹಸು

ಆತಂಕದಲ್ಲಿ ಗ್ರಾಮಸ್ಥರು

ಅರಣ್ಯ ಇಲಾಖೆ ಗಪ್‌ ಚುಪ್

ಹುಲಿ, ಚಿರತೆ, ಕಾಡುಕೋಣ, ಹಂದಿಯಿಂದ ರಕ್ಷಣೆ ಇಲ್ಲ
ಅರಣ್ಯ ಇಲಾಖೆ ಸ್ಪಂಧಿಸುತ್ತಿಲ್ಲ - ಗ್ರಾಮಸ್ಥರು


ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಸಮೀಪದ ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಬಳ ಸರ್ಕಾರಿ ಶಾಲೆ ಬಳಿ ಬುಧವಾರ ಹುಲಿ ದಾಳಿಗೆ ಹಸು ಮೃತಪಟ್ಟಿದೆ.

ಹಸಿರುಮನೆ ಸಮೀಪ ತೋಟಕ್ಕೆಂದು ತೆರಳಿದಾಗ ರೈತರೊಬ್ಬರ ಮೇಲೆ ಇತ್ತೀಚೆಗೆ ಕಾಡುಕೋಣ ದಾಳಿ ಮಾಡಿದೆ. ಈ ಪ್ರಕರಣ ಮಾಸುವ ಮುನ್ನವೇ ನಾಬಳದಲ್ಲಿ ಹುಲಿ ದಾಳಿ ನಡೆಸಿದೆ. ಈ ಭಾಗದಲ್ಲಿ ಹಲವು ದಿನಗಳಿಂದ ಹುಲಿ, ಚಿರತೆ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಸಾಯಿಸುತ್ತಿದೆ.

ಜಾನುವಾರುಗಳ ಮೇಲೆ ಹುಲಿ ದಾಳಿ ಗ್ರಾಮದಲ್ಲಿ ಆತಂಕ ಮೂಡಿಸಿದೆ. ಗ್ರಾಮೀಣ ಪ್ರದೇಶದಲ್ಲಿ ಹುಲ್ಲು, ಸೊಪ್ಪು, ತರಗೆಲೆ, ಕಟ್ಟಿಗೆ, ಕಾಲು ದಾರಿಗಳ ಬಳಕೆ ಮುಂತಾದ ಸಂದರ್ಭ ಏಕಾಂಗಿ ನಡಿಗೆ ಆತಂಕ ಮೂಡಿಸಿದೆ. ಪ್ರಾಣಿಗಳು ಮನುಷ್ಯರ ಮೇಲೂ ದಾಳಿ ಮಾಡುವ ಭಯದ ವಾತಾವರಣ ಸೃಷ್ಟಿಯಾಗಿದ್ದು, ಹುಲಿ, ಚಿರತೆ, ಕಾಡುಕೋಣ, ಹಂದಿ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು ಸ್ಪಂದನೆ ದೊರೆಯುತ್ತಿಲ್ಲ ಎಂದು ಗ್ರಾಮಸ್ತರು ಅಳಲು ತೋಡಿಕೊಳ್ಳುತ್ತಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post