ವಿದ್ಯಾರ್ಥಿಗಳಿಂದ ಶಿಕ್ಷಕರ ಬೇಡಿಕೆ ಇಟ್ಟು ಬಿಸಿಲಿನಲ್ಲಿ ಪ್ರತಿಭಟನೆ

ಬಿಸಿಲಿನಲ್ಲಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳು

‌ತೀರ್ಥಹಳ್ಳಿ ತಾಲ್ಲೂಕಿನ ಮುನ್ನೂರಿನಲ್ಲಿರುವ ಹುಣಸವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 15 ದಿನಗಳಿಂದ ವಿದ್ಯಾರ್ಥಿಗಳು ಶಿಕ್ಷಕರು ಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಸೋಮವಾರ ವಿದ್ಯಾರ್ಥಿಗಳೊಂದಿಗೆ ಪೊಷಕರು ಸೇರಿಕೊಂಡು ಶಾಲೆಗೆ ಜಡಿದು ಮಧ್ಯಾಹ್ನದ ವರೆಗೂ ಬಿಸಿಲಿನಲ್ಲಿ ಧರಣಿ ನಡೆಸಿದ್ದರು. ಮಧ್ಯಾಹ್ನದ ಬಳಿಕ ಇರುವ ಇಬ್ಬರು ಶಿಕ್ಷಕರು ಅಲ್ಲಿಂದ ಕಾಲ್ಕೀಳಬೇಕಾದ ಪರಿಸ್ಥಿತಿ ಬಂದಿತು.

ಇಲ್ಲಿ 1 ರಿಂದ 7ನೇ ತರಗತಿ ವರೆಗೆ ಒಟ್ಟು 38 ಮಕ್ಕಳು ಕಲಿಯುತ್ತಿದ್ದಾರೆ. ಐದು ವರ್ಷದ ಹಿಂದೆ ಕೇವಲ 6 ಮಕ್ಕಳೊಂದಿಗೆ ಮುಚ್ಚುವ ಹಂತದಲ್ಲಿದ್ದ ಶಾಲೆಯನ್ನು ಅಲ್ಲಿನ ಗ್ರಾಮಸ್ಥರೇ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಪಿ. ಅನಿಲ್‌ ನೇತೃತ್ವದಲ್ಲಿ ಮುಂದೆ ನಿಂತು ಪೋಷಕರ ಮನ ಒಲಿಸಿ 36 ಮಕ್ಕಳನ್ನು ಸೇರಿಸುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ಅಲ್ಲಿ ಪುಡಾರಿಗಿರಿ ನಡೆದು ಶಾಲೆಯ ಪುನರುಜ್ಜೀವನಕ್ಕೆ ಶ್ರಮಿಸಿದವರು ದೂರವಾಗಿದ್ದರು. ಈಗ 3 ಮಂದಿ ಶಿಕ್ಷಕರಿದ್ದಾರೆ. ಅವರಲ್ಲಿ ಓರ್ವ ಶಿಕ್ಷಕಿ ಇಲ್ಲಿಂದ ವರ್ಗಾವಣೆ ಪಡೆಯದೇ ಬೇರೆಡೆ ಕೆಲಸ ಮಾಡುತ್ತಿದ್ದಾರೆ. ಒಂದೋ ಆಕೆ ಇಲ್ಲಿ ಪಾಠ ಮಾಡಬೇಕು ಇಲ್ಲವೇ ಬದಲಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಖಾಯಂ ಶಿಕ್ಷಕರನ್ನು ಅಲ್ಲಿ ನೇಮಕ ಮಾಡಬೇಕು ಎಂಬುದು ಪೋಷಕರ ಹಾಗೂ ಎಸ್‌ ಡಿಎಂಸಿ ಸಮಿತಿಯ ಆಗ್ರಹವಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post