ಆರಗದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ಪ್ರಯತ್ನ

 ಗೃಹಸಚಿವರ ಕ್ಷೇತ್ರದಲ್ಲಿ ಪೊಲೀಸರು ಫುಲ್‌ ಸೈಲೆಂಟ್‌
ಯಾರಿಗೆ ಏನೇ ಆದರೂ ರಕ್ಷಣೆ ಇಲ್ಲ..! ಕೇಸೂ ಮಾಡಲ್ಲ
ಪತಿ ಎದುರೇ ನಡೆದ ಘಟನೆ
ಆರೋಪಿಗಳ ರಕ್ಷಣೆಗೆ ಸಂಚು
ಕೇಸ್‌ ಮಾಡುವುದಕ್ಕೂ ಪೊಲೀಸರಿಗೆ ಭಯ
ಪೊಲೀಸರು ಯಾಕೆ ಹಿಂಗೆ..?
ಜೆಸಿ ಆಸ್ಪತ್ರೆಯಲ್ಲಿ ಪತಿ-ಪತ್ನಿ ಅಡ್ಮಿಟ್‌

 ಗೃಹಸಚಿವರ ಕ್ಷೇತ್ರದಲ್ಲಿ ದಲಿತರಿಗೆ ಸಿಗಲ್ವ ನ್ಯಾಯ...? 

ಗೃಹಸಚಿವರ ತವರೂರು ಆರಗ ಸಮೀಪ ನಿರಂತರ ಕ್ರಿಮಿನಲ್‌ ಪ್ರಕರಣ ನಡೆಯುತ್ತಿದೆ. ಅದರೆ ಪೊಲೀಸ್‌ ಇಲಾಖೆ ತನ್ನೆಲ್ಲ ಜವಾಬ್ದಾರಿ ಮರೆತಂತಿದೆ. ತೀರ್ಥಹಳ್ಳಿ ಕ್ಷೇತ್ರಕ್ಕೆ ಗೃಹಸಚಿವರು ಇರುವುದರಿಂದ ತಾಲ್ಲೂಕಿನಲ್ಲಿ ಪೊಲೀಸ್‌ ಸಿಬ್ಬಂದಿಗಳ ಅವಶ್ಯಕತೆ ಇದ್ದಂತೆ ಕಾಣುತ್ತಿಲ್ಲ. ಕಚೇರಿಗಳನ್ನು ನಿಷ್ಕ್ರಿಯ ಮಾಡುವುದು ಒಳ್ಳೆಯದು ಎಂಬ ವಾದ ತಾಲ್ಲೂಕಿನಲ್ಲಿ ಇದೀಗ ಆರಂಭವಾಗಿದೆ. ಪೊಲೀಸರ ಕಾರ್ಯ ವರ್ತನೆ ಕೂಡ ಅನುಮಾನಾಸ್ಪದವಾಗಿದ್ದು ಪಾರದರ್ಶಕತೆ ಬಹುತೇಕ ಮರೆಯಾದಂತಿರುವುದು ದಲಿತ ಮಹಿಳೆಯ ಅತ್ಯಾಚಾರ ಯತ್ನ ಪ್ರಕರಣವು ಸಾಕ್ಷಿಯಂತಿದೆ.

ಗೃಹ ಸಚಿವರ ಸ್ವಕ್ಷೇತ್ರ ಆರಗದಲ್ಲಿ ಸೋಮವಾರ ರಾತ್ರಿ 10.30ರ ಸಮಯದಲ್ಲಿ ದಲಿತ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ನಡೆದಿದೆ ಎನ್ನಲಾದ ಪ್ರಯತ್ನದ ಘಟನೆಯನ್ನು ಮುಚ್ಚಿ ಅರೋಪಿಗಳನ್ನು ರಕ್ಷಿಸುವ ಸಂಚು ಆಡಳಿತದಲ್ಲಿ ನಡೆಯುತ್ತಿದೆ. ಪಟ್ಟಣದ ಸರಕಾರಿ ಜೆಸಿ ಅಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ  ಘಟನೆ ಕುರಿತು ಪೂರ್ಣ ಹೇಳಿಕೆಯನ್ನು ಪೊಲೀಸರಿಗೆ ನೀಡಿ ೨ದಿನ ಕಳೆದರು  ಅರೋಪಿಗಳ ವಿರುದ್ಧ ಠಾಣೆಯಲ್ಲಿ ಕೇಸ್‌ ದಾಖಲಾಗಿಲ್ಲ.

 ಘಟನೆ ಹೇಗಾಯಿತು ?

ಅರೋಗ್ಯ ಸರಿ ಇಲ್ಲದ ಕಾರಣ  ಸೋಮವಾರ ಪತಿ ಜತೆ ಮಹಿಳೆ ತೀರ್ಥಹಳ್ಳಿ ಅಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯಿಂದ ಸಂಜೆ  ಮನೆಗೆ ತೆರಳುತ್ತಿದ್ದ ಸಂದರ್ಭ ದಲಿತ ದಂಪತಿಗಳ ಮೇಲೆ ಬೈಕ್‌ ಹರಿಬಿಟ್ಟು ಅರೋಪಿಗಳು ದೌರ್ಜನ್ಯ ಎಸಗಿದ್ದಾರೆ.

ಕುಡಿತದ ಮತ್ತಿನಲ್ಲಿದ್ದ ನಾಲ್ವರು ಯುವಕರು 2 ಬೈಕ್‌ಗಳನ್ನು ಹರಿಬಿಟ್ಟ ಕಾರಣಕ್ಕೆ ಪತಿಯ ಕಾಲು, ತಲೆಗೆ ಏಟು ಬಿದ್ದು ಕೆಲ ಕಾಲ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಈ ಸಂದರ್ಭ ಆರೋಪಿಗಳು ಮಹಿಳೆಯ ಬಟ್ಟೆ ಹರಿದು ನಿರ್ವಸ್ತ್ರ ಮಾಡಿದ್ದಾರೆ. ಪ್ರಜ್ಞೆ ಹೀನಾಸ್ಥಿತಿಯಲ್ಲಿದ್ದ ಮಹಿಳೆಯ ಪತಿ ತಕ್ಷಣ ಎಚ್ಚರಗೊಂಡು ಕಿರುಚಿಕೊಂಡ ನಂತರ ಸ್ಥಳೀಯರು ಘಟನಾ ಸ್ಥಳಕ್ಕೆ ಓಡಿ ಬಂದಿದ್ದಾರೆ. ಪ್ರಕರಣ ಸೋಮವಾರ ನಡೆದು ಪೊಲೀಸ್‌ ಮೆಟ್ಟಿಲೇರಿದೆ. ಆದರೂ ದಲಿತ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ ಎಂಬುದು ದಲಿತ ಸಂಘರ್ಷ ಸಮಿತಿ ಮುಖಂಡರ ದೂರಾಗಿದೆ.

ತಾಲ್ಲೂಕು ಆಸ್ಪತ್ರೆಯಲ್ಲಿ ದಾಖಲಾಗಿರುವ ದಂಪತಿಗಳು ಪೊಲೀಸ್‌ ಅಧಿಕಾರಿಗಳಿಗೆ ದೂರು ನೀಡಲು ಪ್ರಯತ್ನಿಸಿದ್ದಾರೆ. ದೂರು ನೀಡದಂತೆಯೂ ಪ್ರಕರಣವನ್ನು ಮುಚ್ಚುವ ಪ್ರಯತ್ನ ನಡೆಸಿದ್ದರೆ. ಇಂತಹ ಪ್ರಕರಣಗಳು ತಾಲ್ಲೂಕಿನಲ್ಲಿ ನಿರಂತರ ನಡೆಯುತ್ತಿದೆ. ದೌರ್ಜನ್ಯಕ್ಕೆ ಒಳಗಾಗಿರುವ ದಂಪತಿಗಳು ನೇರವಾಗಿ ಹೇಳಿಕೆ ನೀಡಿದ್ದಾರೆ. ಆರೋಪಿಗಳ ಹೆಸರು ಕೂಡ ಪೊಲೀಸ್‌ ಸಿಬ್ಬಂದಿಗೆ ನೀಡಿದ್ದಾರೆ. ಆದರೆ ಎಫ್‌ಐಆರ್‌ ದಾಖಲು ಮಾಡುತ್ತಿಲ್ಲ ಎಂದು ದಲಿತ ಮುಖಂಡರ ಆರೋಪ.




ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post