‌ಕಿಮ್ಮನೆ ಎಲ್ಲಪ್ಪಾ….!

 ‌ಕಿಮ್ಮನೆ ಎಲ್ಲಪ್ಪಾ….! ಅಮೇರಿಕಾ ಹೋಗಿದ್ದಾನಾ…!

ಯಾವಾಗ ಬರ್ತಾನೆ…!

ಕಿಮ್ಮನೆ ರತ್ನಾಕರ್‌ ವಿಚಾರಿಸಿದ ಸಿದ್ದರಾಮಯ್ಯ

ಮುಡುಬ ರಾಘವೇಂದ್ರರ ಜೊತೆ ಆತ್ಮೀಯವಾಗಿ ಮಾತನಾಡಿದ ಸಿದ್ದು

ಸಿದ್ದರಾಮಯ್ಯನವರ ಜೊತೆ ಮುಡುಬ ರಾಘವೇಂದ್ರ
ಶಿರಸಿಯ ಭೀಮಣ್ಣ ನಾಯ್ಕ್ ಮಾಲಿಕತ್ವದ ಸುಪ್ರಿಯ ಇಂಟರ್ ನ್ಯಾಷನಲ್ ಹೋಟೆಲ್‌ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಆ ಸಮಾರಂಭಕ್ಕೆ ತೆರಳಿದ್ದ ತೀರ್ಥಹಳ್ಳಿಯ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬಾ ರಾಘವೇಂದ್ರ ಅವರ ಬಳಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಅವರನ್ನು ಸಿದ್ದರಾಮಯ್ಯ ವಿಚಾರಿಸಿದ್ದಾರೆ. ಎಲ್ಲಯ್ಯ ಕಿಮ್ಮನೆ… ಕ್ಷೇತ್ರದಲ್ಲಿ ಏನ್‌ ನಡಿತಾ ಇದೆ…ಅಮೇರಿಕಾಗೆ ಹೋಗಿದ್ದಾನಾ…! ಯಾವಾಗ ಬರ್ತಾನೆ… ಅಂತ ತಮ್ಮ ಹಳ್ಳಿ ಭಾಷೆಯ ಸೊಗಡಿನಲ್ಲಿ ವಿಚಾರಿಸಿದ್ದಾರಂತೆ.
ಸಿದ್ದರಾಮಯ್ಯ ಅವರನ್ನು ಭೇಟಿಯಾಗುತ್ತಿದ್ದಂತೆ ಆತ್ಮೀಯವಾಗಿ ಮುಡುಬ ರಾಘವೇಂದ್ರ ಅವರನ್ನು ಮಾತನಾಡಿಸಿದ್ದಾರೆ. ತೀರ್ಥಹಳ್ಳಿಯ ಕಾಂಗ್ರೆಸ್‌ ಪಕ್ಷದ ಸಂಘಟನೆ, ಮತದಾರರ ಒಲವು ಮುಂತಾದ ವಿಚಾರಗಳನ್ನು ಪಡೆದಿದ್ದಾರೆ. ಇನ್ನು ಕ್ರಿಯಾಶೀಲವಾಗಿ ಸಂಘಟನೆ ಕಟ್ಟುವ ವಿಚಾರವನ್ನು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಸಾಗರದ ಮಾಜಿ ಶಾಸಕ, ಮಾಜಿ ಸಚಿವರು ಕಾಗೋಡು ತಿಮ್ಮಪ್ಪ, ಸೊರಬದ ಮಾಜಿ ಶಾಸಕ ಮಧು ಬಂಗಾರಪ್ಪ ಮುಂತಾದವರು ಭಾಗವಹಿಸಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post