ತಹಸೀಲ್ದಾರ್ ಡಾ.ಎಸ್.ಬಿ. ಶ್ರೀಪಾದ್ ವರ್ಗಾವಣೆ

ತಹಶೀಲ್ದಾರ್ ಶ್ರೀಪಾದ್ ವರ್ಗಾವಣೆ

ಬೆಂಗಳೂರು ಅಪರ ಆಯುಕ್ತರಾಗಿ ವರ್ಗಾವಣೆ

ಕಂದಾಯ ಇಲಾಖೆಗೆ ಅನೇಕ ಪ್ರಸ್ತಾವನೆ ಸಲ್ಲಿಸಿದ್ದ ತಹಶೀಲ್ದಾರ್
ನಿಷ್ಕಳಂಕ ವ್ಯಕ್ತಿತ್ವದ, ಸಾಹಿತ್ಯ ಪ್ರೇಮಿ, ಸಮಾಜದ ಎಲ್ಲಾ ವಿಭಾಗದಲ್ಲಿಯೂ ಪಾಂಡಿತ್ಯ ಪಡೆದಿದ್ದ, ಸಜ್ಜನ, ಅಗಾದ ಪಾಂಡಿತ್ಯ ಹೊಂದಿದ ತೀರ್ಥಹಳ್ಳಿ ತಹಶೀಲ್ದಾರ್ ಡಾ.ಎಸ್.ಬಿ ಶ್ರೀಪಾದ್ ಪದೋನ್ನತಿ ಹೊಂದಿ ಬೆಂಗಳೂರು ಅಪರ ಆಯುಕ್ತರಾಗಿ ವರ್ಗಾವಣೆಯಾಗಿದ್ದಾರೆ.
ಇವರ ಕಾಲಘಟದಲ್ಲಿ ಕಂದಾಯ ಇಲಾಖೆಯ ಅನೇಕ ಜಟಿಲ ಕಾನೂನುಗಳ ತೊಡಕು ನಿವಾರಣೆ ಸೇರಿದಂತೆ, ಸಾರ್ವಜನಿಕರ ಕೆಲಸಕ್ಕೆ ಬೇಕಾದ ಅನೇಕ ಕಾನೂನು ರೂಪಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದರು.

ಕರೋನಾ ಅವಧಿಯಲ್ಲಿ ಒಳ್ಳೆಯ ಸೇವೆ ನೀಡಿ ಜನರ ಪ್ರೀತಿಗೆ ಪಾತ್ರರಾಗಿದ್ದರು. ಸಿಬ್ಬಂದಿ, ಜನತೆಗೆ ಅವರನ್ನು ಪ್ರೀತಿಯಿಂದ ಬೀಳ್ಕೊಡುಗೆ ಮಾಡಲಿದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post