ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತೀರ್ಥಹಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ವಿಜಯವಾಣಿ ವರದಿಗಾರ ಡಾನ್ ರಾಮಣ್ಣ ಅವಿರೋಧ ಆಯ್ಕೆಯಾಗಿದ್ದಾರೆ.
ಜಿಲ್ಲಾ ವಿಶೇಷ ಪ್ರತಿನಿಧಿಯಾಗಿ ನಿಕಟಪೂರ್ವ ಅಧ್ಯಕ್ಷ ಟಿ.ಕೆ. ರಮೇಶ್ ಶೆಟ್ಟಿ, ತಾಲ್ಲೂಕು ಉಪಾಧ್ಯಕ್ಷರಾಗಿ ಮುನ್ನೂರು ಮೋಹನ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಮುರುಘರಾಜ್, ಜಿಲ್ಲಾ ಪ್ರತಿನಿಧಿಯಾಗಿ ಟಿ.ಜೆ.ಅನಿಲ್ ಆಯ್ಕೆಗೊಂಡಿದ್ದಾರೆ.
ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಟಿ.ಕೆ. ರಮೇಶ್ ಶೆಟ್ಟಿ, ಚುನಾವಣಾಧಿಕಾರಿ, ರಾಜ್ಯ ಸಮಿತಿ ನಿರ್ದೇಶಕ ರವಿಕುಮಾರ್, ಜಿಲ್ಲಾ ಉಪಾಧ್ಯಕ್ಷ ವೈದ್ಯನಾಥ್, ಜಿಲ್ಲಾ ಉಪಾಧ್ಯಕ್ಷ ಕೆ.ಎಸ್. ಹುಚ್ಚರಾಯಪ್ಪ, ಜಿಲ್ಲಾ ಕಾರ್ಯದರ್ಶಿ ಸೋಮನಾಥ್ ಇದ್ದರು.