ನಿಧಿ ಸುರೇಶ್‌ ಶೇಟ್‌ ರನ್ನರ್‌ ಆಫ್‌

 ವಾಯ್ಸ್‌ ಆಫ್‌ ಶಿವಮೊಗ್ಗ ಸೀಸನ್‌-4 ಗ್ರಾಂಡ್‌ ಫಿನಾಲೆ


ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಭಾನುವಾರ ನಡೆದ ವಾಯ್ಸ್‌ ಆಫ್‌ ಶಿವಮೊಗ್ಗ ಸೀಸನ್-4‌ ಗ್ರಾಂಡ್‌ ಫಿನಾಲೆಯಲ್ಲಿ ಮೇಲಿನ ಕುರುವಳ್ಳಿಯ ಯುವ ಗಾಯಕಿ ನಿಧಿ ಸುರೇಶ್‌ ಶೇಟ್ ರನ್ನರ್‌ ಆಫ್‌ ಆಗಿ ಹೊರ ಹೊಮ್ಮಿದ್ದಾರೆ.

ನಿಧಿ ಮೇಲಿನ ಕುರುವಳ್ಳಿಯ ಕ್ಲಾಸ್‌ 1 ಕಂಟ್ರಾಕ್ಟರ್‌ ಸುರೇಶ್‌ ಶೆಟ್‌, ಮಮತಾ ದಂಪತಿಯ ಪುತ್ರಿ.

ನಿಧಿ ತೀರ್ಥಹಳ್ಳಿ ತಾಲ್ಲೂಕಿನ ಅನೇಕ ಸಾಂಸ್ಕೃತಿ ಕಾರ್ಯಕ್ರಮದಲ್ಲಿ ತಮ್ಮ ಧ್ವನಿ ನೀಡಿದ್ದಾರೆ. ಬಾಲ್ಯದಿಂದಲೇ ಸಂಗೀತದ ಕುರಿತು ವಿಶೇಷ ಆಸಕ್ತಿ ಬೆಳೆಸಿಕೊಂಡಿದ್ದು, ರಾಜ್ಯದಲ್ಲಿ ಉತ್ತಮ ಗಾಯಕಿಯಾಗುವ ಅವಕಾಶ ಇದೆ. ಹಾಡುಗಾರಿಕೆಯಲ್ಲಿ ಇನ್ನಷ್ಟು ಪಕ್ವತೆ ಬೆಳೆಸಿಕೊಳ್ಳಲಿ. ಆಕೆಯ ಭವಿಷ್ಯ ಉಜ್ವಲವಾಗಲಿ ಎಂಬುದು ನೆಲದ ಧ್ವನಿ ಸಂಪಾದಕ ಮಂಡಳಿಯ ಹಾರೈಕೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post