ರಾಷ್ಟ್ರಕವಿ ಕುಪ್ಪಳ್ಳಿ ಪ್ರತಿಷ್ಠಾನಕ್ಕೆ ರಾಜೀನಾಮೆ
ನಾಡೋಜ ಡಾ. ಹಂಪ ನಾಗರಾಜಯ್ಯ |
ಪಠ್ಯ ಪರಿಷ್ಕರಣೆಯಲ್ಲಿ ಮತ್ತು ನಾಡಗೀತೆಗೆ ಅವಮಾನಿಸಿದ ಹಿನ್ನಲೆಯಲ್ಲಿ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ನಾಡೋಜ ಡಾ. ಹಂಪ ನಾಗರಾಜಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ನೇರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವುದು ಸಾಂಸ್ಕೃತಿಕ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ.
ಸ್ಪಷ್ಟವಾಗಿ ಈ ಕುರಿತು ತಮ್ಮ ಅಸಮಾಧಾನ ತೋರಿರುವ ಅವರು ಕುವೆಂಪು ಅಂತಹ ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ಈ ಸರ್ಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ. ಅವರನ್ನು ಮತ್ತು ಪವಿತ್ರವಾದ ನಾಡಗೀತೆಯನ್ನು ಅಪಮಾನಿಸುತ್ತಿರುವುದನ್ನು ನೋಡಿಕೊಂಡು ತೆಪ್ಪಗಿರುವುದು ಸಾಧ್ಯವಾಗುತ್ತಿಲ್ಲ. ಹಾಗಾಗಿ ತನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಅವರು ಮುಖ್ಯಮಂತ್ರಿಯನ್ನು ಕೋರಿದ್ದಾರೆ.