ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಅಭಿನಂದನೆ
ಲಲಿತಮ್ಮ ಚಾರಿಟೇಬಲ್ ಟ್ರಸ್ಟ್ ಮಾನವೀಯ ಕಾರ್ಯ
ಮೇಗರವಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸನ್ಮಾನ
2021-22 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 90% ಕ್ಕಿಂತ ಅಧಿಕ ಅಂಕ ಗಳಿಸಿದ ಮೇಗರವಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಲಲಿತಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಈಚೆಗೆ ಇನ್ಸ್ ಪೈರ್ ಮನಾಕ್ ಸ್ಪರ್ಧೆಯಲ್ಲಿ ಆಯ್ಕೆಯಾಗಿರುವ ಸುಶಾಂತ್ ಎನ್ ಪ್ರಭು ಹಾಗೂ ನಿವೃತ್ತಿ ಹೊಂದುತ್ತಿರುವ ಪ್ರಥಮ ದರ್ಜೆ ಸಹಾಯಕ ಶಂಕರ್ ಹೆಚ್ ಇವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಸಮಾರಂಭಕ್ಕೆ ಸಹಕಾರ ನೀಡಿದ ಲಲಿತಮ್ಮ ಚಾರಿಟೇಬಲ್ ಟ್ರಸ್ಟ್ ನ ವಿಜೇತ ಇವರಿಗೆ ಶಾಲಾಭಿವೃದ್ದಿ ಸಮಿತಿ ಧನ್ಯವಾದ ಅರ್ಪಿಸಿದ್ದಾರೆ.