ಹರಿಜನ ಕಾಲೋನಿಯಲ್ಲಿ ಕಳಪೆ ಕಾಮಗಾರಿ

ಖಂಡಕ ಗ್ರಾಮದಲ್ಲಿ ಸಿದ್ದತೆ
1 ಇಂಟು ವೆಟ್‌ ಮಿಕ್ಸ್‌ ಆರೋಪ


ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖಂಡಕ ಗ್ರಾಮದ ಹರಿಜನ ಕಾಲೋನಿಯಲ್ಲಿ ಸುಮಾರು 50 ಲಕ್ಷ ವೆಚ್ಚದ ಕಾಂಕ್ರಿಟ್‌ ರಸ್ತೆ ಕಾಮಗಾರಿ ನಡೆಯುತ್ತಿದೆ. ಕೇವಲ 800 ಮೀಟರ್‌ ಉದ್ದದ ರಸ್ತೆಯನ್ನು ಕಳಪೆ ಕಾಮಗಾರಿ ಮೂಲಕ 10 ಲಕ್ಷ ವೆಚ್ಚದಲ್ಲಿ ಮುಗಿಸುವ ಯೋಜನೆ ರೂಪಿಸಲಾಗಿದೆ ಎಂದು ಗ್ರಾಮಸ್ಥರು ದೂರುತಿದ್ದಾರೆ.


ಆರಂಭದಲ್ಲೇ ಕಾಮಗಾರಿ ಕಳಪೆಯಿಂದ ಕೂಡಿದೆ. 6 ಇಂಚು ವೆಟ್‌ಮಿಕ್ಸ್‌ ಬದಲಿಗೆ ಕೇವಲ 1 ಇಂಚು ಬಳಸಲಾಗಿದೆ. 50 ಲಕ್ಷ ಕಾಮಗಾರಿ ಮಂಜೂರಾಗಿದ್ದು ಕಡಿಮೆ ಖರ್ಚಿನಲ್ಲಿ ಮುಗಿಸುವ ಯೋಜನೆ ಇದಾಗಿದೆ. ಇಂಜಿನಿಯರ್‌ ಕೂಡ ಕಳಪೆ ಕಾಮಗಾರಿಯಲ್ಲಿ ಕೈಜೋಡಿಸಿದ್ದಾರೆ. ಕಾಂಕ್ರಿಟ್‌ ಹಾಕುವ ಮುನ್ನ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಗುಣಮಟ್ಟ ಪರಿಶೀಲಿಸಬೇಕು. ಇಲ್ಲದಿದ್ದರೆ ಕಳಪೆ ಕಾಮಗಾರಿಯ ವಿರುದ್ದ ಹೋರಾಟ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post