ಗೃಹಸಚಿವರ ಸ್ವಕ್ಷೇತ್ರದಲ್ಲಿ ಇದೇನ್‌ ಕಥೆ…!

ತೀರ್ಥಹಳ್ಳಿಯಲ್ಲಿ ಗೋಮಾಂಸ ದಂಧೆ
ಮಾಳೂರು ಪೊಲೀಸರಿಂದ ಗ್ಯಾಂಗ್‌ ಮೇಲೆ ಅಟ್ಯಾಕ್‌
ಓರ್ವ ಅರೆಸ್ಟ್…

ವಶಕ್ಕೆ ಪಡೆದ ಗೋವು
ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಂಡಿದ್ದರು ಗೋಹತ್ಯೆ, ಗೋ ಕಳ್ಳ ಸಾಗಾಣೆ ದಂಧೆಗೆ ಕಡಿವಾಣ ಬಿದ್ದಿಲ್ಲ. ಗುರುವಾರ ಬೆಳ್ಳಂಬೆಳಗ್ಗೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್‌ ಠಾಣೆಯ ಪಿಎಸ್‌ ಐ ನವೀನ್‌ ಮಠಪತಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಗೋಹತ್ಯೆ ಪ್ರಯತ್ನದ ಪ್ರಕರಣ ಬಹಿರಂಗವಾಗಿದೆ.

ಮಂಡಗದ್ದೆಯ ವಲಯಾರಣ್ಯ ಕಚೇರಿ ಸಮೀಪ ಗೋಹತ್ಯೆಗೆ ಕೆಲ ದುಷ್ಕರ್ಮಿಗಳು ಸಂಚು ನಡೆಸಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿ ಯಜಾಜ್‌ ಸಹಿತ ಗೋವನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ. ಆರೋಪಿ ಮನೆಯಲ್ಲಿ ಗೋವನ್ನು ವಶಕ್ಕೆ ಪಡೆಯಲಾಗಿದೆ.

ಮಂಡಗದ್ದೆ, ತೀರ್ಥಹಳ್ಳಿ, ಕೋಣಂದೂರು, ಹಣಗೆರೆ , ಹೊಸೂರು, ಕಮ್ಮರಡಿ, ಕಡ್ತೂರು, ಬೆಜ್ಜವಳ್ಳಿ ಸೇರಿದಂತೆ ಅನೇಕ ಭಾಗದಲ್ಲಿ ಗೋಮಾಂಸ ಮಾರಾಟ ದಂಧೆ ವಿಪರೀತವಾಗಿದ್ದು ಸ್ಥಳೀಯರ ಅನೇಕ ದೂರಿನ ನಡುವೆಯೂ ದಂಧೆ ನಿಯಂತ್ರಣವಾಗಿಲ್ಲ. ಗೋಮಾಂಸ, ಗೋ ಕಳ್ಳ ಸಾಗಾಣೆ ದಂಧೆಗೆ ತೀರ್ಥಹಳ್ಳಿ ಕೇಂದ್ರ ಸ್ಥಾನದಂತಿದ್ದು ಪೊಲೀಸರಿಗೆ ಸವಾಲಾಗಿದೆ.

ಗೃಹಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರದಲ್ಲೇ ಗೋಹತ್ಯೆ, ಗೋಮಾಂಸ ಮಾರಾಟ, ಗೋವು ಕಳ್ಳ ಸಾಗಣೆ ದಂಧೆ ಸಲೀಸಾಗಿ ನಡೆಯಲು ಅವಕಾಶ ಸಿಕ್ಕಿರುವುದು ಸಾರ್ವಜನಿಕವಾಗಿ ಆಕ್ರೋಶಕ್ಕೆ ಗುರಿಯಾಗಿದೆ. ರಾಜ್ಯ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಭಾರೀ ಪ್ರಚಾರದೊಂದಿಗೆ ಹೆಬ್ಬುಬ್ಬೆಯಲ್ಲಿ ಜಾರಿಗೆ ತಂದು ಈಗ ಮೌನಕ್ಕೆ ಜಾರಿರುವ ಹಿಂದಿನ ಗುಟ್ಟೇನು? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿದೆ.

ಪೊಲೀಸರ ದಾಳಿ ತಂಡದಲ್ಲಿ ಸಿಬ್ಬಂದಿಗಳಾದ ಸಂದೀಪ್‌, ಅಭಿಲಾಷ್‌, ಪುನೀತ್‌, ಜೀಪ್‌ ಚಾಲಕ ಅಭಿಲಾಷ್‌ ಮತ್ತಿತರರು ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post