ಮೆಸ್ಕಾಂ ಟಿಸಿ ರಿಪೇರಿ ಘಟಕ ಉದ್ಘಾಟಿಸಿದ ಆರಗ ಜ್ಞಾನೇಂದ್ರ

24 ಘಂಟೆಯಲ್ಲಿ ಟಿಸಿ ರಿಪೇರಿ
ತಿಂಗಳಿಗೆ 150 ರಿಂದ 200 ಟಿಸಿ ರಿಪೇರಿ
ಗುಣಮಟ್ಟದ ವಿದ್ಯುತ್ ಪೂರೈಕೆಯ ಸಂಕಲ್ಪ
ಇನ್ನಾದರೂ ತಪ್ಪಿದೆ ವೋಲ್ಟೇಜ್ ಸಮಸ್ಯೆ

ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆಯ ಮೆಸ್ಕಾಂ ಇಲಾಖೆಯ ಸಮೀಪ ನಿರ್ಮಿಸಿರುವ ನೂತನ ಟಿಸಿ ರಿಪೇರಿ ಕೇಂದ್ರವನ್ನು ಶನಿವಾರ ಗೃಹಸಚಿವ ಆರಗ ಜ್ಞಾನೇಂದ್ರ ಉದ್ಘಾಟಿಸಿದರು.
ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಬದುಕಿನ ಭಾಗವಾಗಿ ವಿದ್ಯುತ್‌ ಬಳಕೆ ಆರಂಭವಾಗಿದೆ. ಮಿಕ್ಸಿ ರನ್‌ ಮಾಡಲು ವಿದ್ಯುತ್‌ ಅವಶ್ಯಕ. ಗುಣಮಟ್ಟದ ವಿದ್ಯುತ್‌ ಪೂರೈಕೆ ಮಾಡುವ ಕೆಲವು ಸಂದರ್ಭ ತಾಂತ್ರಿಕ ಸಮಸ್ಯೆ ಎದುರಾಗುತ್ತಿತ್ತು. ಅಂತಹ ಸಮಸ್ಯೆ ಗುರುತಿಸಿ ಪರಿಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ. ಕೋಣಂದೂರು, ಕಮ್ಮರಡಿ, ಬೆಜ್ಜವಳ್ಳಿ ಉಪಕೇಂದ್ರ ಸ್ಥಾಪಿಸಿದ್ದು, ಬೇಡಿಕೆ ಇರುವ ಹೆದ್ದೂರು, ಎಂಕೆಬೈಲು ಉಪಕೇಂದ್ರ ನಿರ್ಮಾಣಕ್ಕೆ ಕ್ರಮ ಕೃಗೊಳ್ಳಲಾಗಿದೆ ಎಂದು ಹೇಳಿದರು.
ಗ್ರಾಮೀಣ ಭಾಗದಲ್ಲಿ ಹಾಳಾದ ವಿದ್ಯುತ್‌ ಪರಿವರ್ತಕ ರಿಪೇರಿ ಮಾಡಲು ಈ ಹಿಂದೆ ವಾರಗಟ್ಟಲೆ ಕಾಯಬೇಕಿತ್ತು. ಇದೀಗ ರಿಪೇರಿ ಕೇಂದ್ರ ಉದ್ಘಾಟನೆಗೊಂಡಿದ್ದು 24 ಗಂಟೆಯೊಳಗೆ ದುರಸ್ಥಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಶಿವಮೊಗ್ಗ ವಿಭಾಗದ ಎಇಇ ವೀರೇಂದ್ರ ಮಾತನಾಡಿ, ತಾಲ್ಲೂಕಿನಲ್ಲಿ 74 ಸಾವಿರ ಬಳಕೆದಾರರಿದ್ದು, ಮೂರುವರೆ ಸಾವಿರ ಟಿಸಿಗಳು ಕಾರ್ಯನಿರ್ವಹಿಸುತ್ತಿದೆ. ವರ್ಷಕ್ಕೆ 450 ರಿಂದ 500 ಟಿಸಿಗಳು ಹಾಳಾಗುತ್ತವೆ. ರಿಪೇರಿ ಕೇಂದ್ರದಿಂದ ತಿಂಗಳಿಗೆ ಸುಮಾರು 150 ರಿಂದ 200 ಟಿಸಿಗಳನ್ನು ದುರಸ್ಥಿ ಮಾಡಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಮ್‌, ಉಪಾಧ್ಯಕ್ಷ ಜಯಪ್ರಕಾಶ್‌ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ಸದಸ್ಯರಾದ ಸೊಪ್ಪುಗುಡ್ಡೆ ರಾಘವೇಂದ್ರ, ಸಂದೇಶ್‌ ಜವಳಿ, ಶಿವಮೊಗ್ಗ ವಿಭಾಗದ ಅಧೀಕ್ಷಕ ಇಂಜಿನಿಯರ್‌ ಶ್ರೀಧರ್‌, ಮುಖ್ಯ ಇಂಜಿನಿಯರ್‌ ಬಸಪ್ಪ ಇದ್ದರು.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post