ಮಂಜುನಾಥ ಗೌಡರ ಬೆಂಬಲಿಗರ ಕಾರಿನಲ್ಲಿ ಕುಳಿತಿದ್ದರಾ ಡಿಕೆಶಿ

ಡಿಕೆಶಿಗೆ ಪಿಕಪ್-ಡ್ರಾಪ್ ಮಾಡಿದ ಕಾರು ಯಾರದ್ದು...?
ಶಿವಮೊಗ್ಗದ ಜನದನಿ ಬೃಹತ್ ಪ್ರತಿಭಟನಾ ಸಭೆಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ್ದ ಡಿಕೆಶಿಗೆ ಕಾರಿನ ವ್ಯವಸ್ಥೆ ಕಲ್ಪಿಸಿದ್ದೆ ಆರ್.ಎಂ. ಮಂಜುನಾಥ ಗೌಡರು. ಗೌಡರ ಕಟ್ಟಾ ಬೆಂಬಲಿಗರೊಬ್ಬರ ಫಾರ್ಚೂನರ್ ಕಾರಿನಲ್ಲಿ ಡಿಕೆಶಿಗೆ ಹೆಲಿಪ್ಯಾಡ್ ನಿಂದ ಕರೆತರಲಾಗಿದೆ.
ಗೌಡರಿಗೆ ಆಪ್ತರಾಗಿರುವ ಡಿಕೆಶಿ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಾರೆ ಎಂದಾಕ್ಷಣ ಬೆಂಬಲಿಗರೊಬ್ಬರ ಫಾರ್ಚೂನರ್ ಕಾರು ಕಳಿಸಿದ್ದಾರೆ. ಕಾರಿನಲೇ ತೀರ್ಥಹಳ್ಳಿ ಕ್ಷೇತ್ರದ ಬಹಳ ಮುಖ್ಯ ರಾಜಕೀಯ ಚರ್ಚೆ ನಡೆದಿದೆ. ಹೀಗಾಗಿ ವೇದಿಕೆ ಕಾರ್ಯಕ್ರಮದಲ್ಲೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ಭಾಷಣಕ್ಕೆ ಅವಕಾಶ ನೀಡಲಿಲ್ಲ ಎಂಬುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post