ಸೂಲಿಬೆಲೆಯ ಚಿನ್ನದ ರಸ್ತೆಯಲ್ಲಿ ಮಲೆನಾಡಿಗರ ಹೂಟಿ

ಕುಪ್ಪಳ್ಳಿಯಿಂದ ಕಾಂಗ್ರೆಸ್‌ ಪಾದಯಾತ್ರೆ ಎಚ್ಚರಿಕೆ

ದೇಶ ದ್ರೋಹಿ ಪ್ರಕರಣಕ್ಕೆ ಆಗ್ರಹ

ದೇಶ ವಾಸಿಗಳನ್ನು ಅವಮಾನಿಸುವ ಪ್ರಯತ್ನ ರೋಹಿತ್‌ ಚಕ್ರತೀರ್ಥನಿಂದ ನಡೆದಿದೆ. ಪಠ್ಯ ಕ್ರಮವನ್ನು ಬದಲಾಯಿಸಿ ನಾಡಗೀತೆಗೆ ಅವಮಾನಿಸಿರುವ ರೋಹಿತ್‌ ಚಕ್ರತೀರ್ಥ ದೇಶವಾಸಿಗಳ ದ್ರೋಹಿ. ಇತಿಹಾಸ ಪ್ರಜ್ಞೆ ಇಲ್ಲದ ರೋಹಿತ್‌ ಚಕ್ರತೀರ್ಥ ದೇಶವನ್ನು ಇಬ್ಬಾಗಿಸುವ ಕುತಂತ್ರ ನಡೆಸುತ್ತಿದ್ದು ಆತನ ಮೇಲೆ ದೇಶದ್ರೋಹಿ ಪ್ರಕರಣ ದಾಖಲಿಸಬೇಕು - ಮುಡುಬ ರಾಘವೇಂದ್ರ, ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ


ನಾರಾಯಣಗುರು, ಪಿ. ಲಂಕೇಶ್‌, ಅಂಬೇಡ್ಕರ್‌, ಬಸವಣ್ಣನವರ ಪಠ್ಯವನ್ನು ಕೈ ಬಿಡಲಾಗಿದೆ. ಶಾಲೆಯಿಂದಲೇ ಕೇಸರೀಕರಣ ಸಿದ್ದತೆ ನಡೆದಿದೆ. ಮಕ್ಕಳ ಭವಿಷ್ಯದ ಹೊಣೆ ಹೊತ್ತು ಬಿಜೆಪಿ ಸರ್ಕಾರ ರೋಹಿತ್‌ ಚಕ್ರತೀರ್ಥ ವಜಾಗೊಳಿಸಬೇಕು. ಇಲ್ಲದಿದ್ದರೆ ಕುಪ್ಪಳ್ಳಿಯಿಂದ ಪಾದಯಾತ್ರೆ ನಡೆಸುವುದಾಗಿ ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುಡುಬ ರಾಘವೇಂದ್ರ ನೇತೃತ್ವದ ಪ್ರತಿಭಟನಾ ಸಭೆ ಆಗ್ರಹಿಸಿತು

ನಾಡಗೀತೆ, ಕುವೆಂಪು ಅವರಿಗೆ ಅವಮಾನಿಸಿ ಶಿಕ್ಷಣ ಕ್ಷೇತ್ರವನ್ನು ಕಲುಷಿತ ಮಾಡಿದ್ದಾರೆ. ಇಂತಹವರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ಕಿಮ್ಮನೆ ರತ್ನಾಕರ ಅವರ ನೇತೃತ್ವದಲ್ಲಿ ಕುಪ್ಪಳ್ಳಿಯಿಂದ ಪಾದಯಾತ್ರೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಪಟಮಕ್ಕಿ ಮಹಬಲೇಶ್‌, ಇತಿಹಾಸ ತಿರುಚುವ ಕೆಲಸ ಹಿಂದಿನಿಂದ ನಡೆದಿದೆ. ಮುಸ್ಸದಿ ರಾಜಕಾರಣಿ ವಾಜಪೇಯಿ ಕಾಲದಿಂದಲೇ ಕೇಸರಿ ಸಾಹಿತ್ಯ ಆರಂಭವಾಗಿದೆ. ಮಕ್ಕಳಲ್ಲಿ ವಿಷಬೀಜ ಬಿತ್ತುವ ಕೆಲಸ ಸರಿಯಲ್ಲ. ಭಾರತ ಸರ್ವ ಜನಾಂಗದ ಶಾಂತಿಯ ತೋಟ ಎಂದರು.

ಸೂಲಿಬೆಲೆಯ ಚಿನ್ನದ ರಸ್ತೆಯಲ್ಲಿ ಮಲೆನಾಡಿಗರು ಹೂಟಿ ಮಾಡುತ್ತಿದ್ದಾರೆ. ಅಂದೇ ಸಂತತಿಯ ಚಕ್ರತೀರ್ಥನಿಂದ ಕನ್ನಡಕ್ಕೆ ಅಪಮಾನವಾಗಿದೆ. ಆಡಳಿತ ಪಕ್ಷಕ್ಕೆ ರೈತ ನಾಯಕ ರಾಕೇಶ್‌ ಟಿಕಾಯತ್ ಅವರಿಗೆ ಭದ್ರತೆ ನೀಡಲು ಸಾಧ್ಯವಾಗಿಲ್ಲ ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೂರ್ಣೇಶ್‌ ಕೆಳಕೆರೆ ಹೇಳಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಮ್‌, ಉಪಾಧ್ಯಕ್ಷ ಜಯಪ್ರಕಾಶ್‌ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ಸದಸ್ಯರಾದ ಬಿ.ಗಣಪತಿ, ಸುಶೀಲ, ಗೀತಾ, ಮಂಜುಳ, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಕೆಳಕೆರೆ ದಿವಾಕರ್‌, ಯುವ ಕಾಂಗ್ರೆಸ್‌ ಅಧ್ಯಕ್ಷರಾದ ಅಮರನಾಥ ಶೆಟ್ಟಿ, ಪುಟ್ಟೋಡ್ಲು ರಾಘವೇಂದ್ರ, ಮುಖಂಡರಾದ ಅಮ್ರಪಾಲಿ ಸುರೇಶ್‌, ಸಿಂಧುವಾಡಿ ಸತೀಶ್‌, ಪ್ರಶಾಂತ್‌ ಮುಂತಾದವರು ಇದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post