ಕಾಂಗ್ರೆಸ್ ಓಬಿಸಿಯನ್ನು ಮತಬ್ಯಾಂಕ್ ಮಾಡಿಕೊಂಡಿತ್ತು
ಶೋಷಿತ ಸಮೂದಾಯದ ಜಾಗ್ರತೆಗೆ ಪಣತೊಟ್ಟ ಮೋದಿ
ಹಿಂದುಳಿತ ವರ್ಗಕ್ಕೆ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಸ್ಥಾನಮಾನ ನೀಡುವುದರಲ್ಲಿ 68 ವರ್ಷಗಳ ಕಾಂಗ್ರೆಸ್ ಪಕ್ಷ ಸೋತಿದೆ. ಕೇಂದ್ರ ಸರ್ಕಾರ ಶೇಕಡಾ 27 ರಷ್ಟು ಮೀಸಲಾತಿಯನ್ನು ನೀಡುವ ಮೂಲಕ ಸಂವಿಧಾನಿಕ ಮಾನ್ಯತೆ ಒದಗಿಸಿದೆ ಎಂದು ರಾಜ್ಯ ಓಬಿಸಿ ಮೋರ್ಚಾ ಉಪಾಧ್ಯಕ್ಷ ಅಶೋಕಮೂರ್ತಿ ಹೇಳಿದರು.
ಓಬಿಸಿ ವರ್ಗಗಳು ಕೇವಲ ಮತಬ್ಯಾಂಕ್ ಆಗಿ ನಿರ್ಮಾಣಗೊಂಡಿತ್ತು. ಬಲಿಷ್ಠ ಸಮೂದಾಯಗಳ ನಡುವೆ ಹಿಂದುಳಿದ ವರ್ಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಲು ಸಾಧ್ಯವಾಗುತ್ತಿರಲಿಲ್ಲ. ಶೋಷಿತ ಸಮೂದಾಯದ ಜಾಗ್ರತೆಯಂತಹ ಕಾರ್ಯಕ್ರಮ ನಿರ್ಮಾಣವಾಗಿದ್ದು, ವಿಶೇಷ ಅನುದಾನ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಕೇಂದ್ರ, ರಾಜ್ಯ ಸರ್ಕಾರ ತುಳಿತಕ್ಕೆ ಒಳಗಾಗಿರುವ ಸಮೂದಾಯಗಳನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿದೆ. ಸಮೂದಾಯಕ್ಕೆ ಆದ್ಯತೆ ನೀಡುವುದರಿಂದ ಜಾತಿಯಾಧಾರಿತ ಗೋಡೆ ನಿರ್ಮಾಣವಾಗುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಹಿಂದುಳಿದ ವರ್ಗಗಳು ಶೋಷಣೆಗೆ ಒಳಗಾಗಿದ್ದಾರೆ. ಸಾಮೂದಾಯಿಕ ಸ್ಥಾನಮಾನಕ್ಕೆ ಹೋರಾಟ ಮಾಡುವುದು ಕಷ್ಟ. ಆ ಹಿನ್ನಲೆಯಲ್ಲಿ ಅವಶ್ಯಕವಾಗಿದೆ ಎಂದರು.
ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಿ.ಎನ್. ಮಾಲ್ತೇಶ್ ಮಾತನಾಡಿ, ಜಿಲ್ಲಾ, ಗ್ರಾಮ, ಪಟ್ಟಣದ ಸದಸ್ಯರನ್ನು ಒಳಗೊಂಡ ಸಮಿತಿ ಮೂಲಕ ಹಿಂದುಳಿದ ವರ್ಗಗಳ ಸ್ಥಿತಿಗತಿ ಅಧ್ಯಯನಕ್ಕೆ ಸಿದ್ದತೆ ನಡೆದಿದೆ. ತೀರ್ಥಹಳ್ಳಿಯಲ್ಲಿ ಜೂನ್ 25ರಂದು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಬಾಳೇಬೈಲು ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಬೇಗುವಳ್ಳಿ ಕವಿರಾಜ್, ಹೆದ್ದೂರು ನವೀನ್, ಜಿಲ್ಲಾ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಕೇಶ್, ಪ್ರಭಾರಿ ರಾಜೇಶ ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸಾಲೇಕೊಪ್ಪ ರಾಮಚಂದ್ರ, ತಾಲ್ಲೂಕು ಓಬಿಸಿ ಮೋರ್ಚಾ ಅಧ್ಯಕ್ಷ ಹೊನ್ನಾಸ್ಗದ್ದೆ ಮಂಜುನಾಥ್ ಇದ್ದರು.