ಪಟ್ಟಣದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು

ಪೋಷಾಕು ವಿತರಿಸಿದ ಆರಗ ಜ್ಞಾನೇಂದ್ರ

ಆಶ್ರಯ ಸಮಿತಿ ಸಭೆಗೆ ಪತ್ರಕರ್ತರಿಗೆ ನಿರ್ಬಂಧ

ಗೃಹಸಚಿವರು ಯಾಕೆ ಹೀಗೆ ಮಾಡಿದರ್ರು….?

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ರೈನ್‌ ಕೋಟ್‌, ಗ್ಲೌಸ್‌, ಟೊಪ್ಪಿ, ಗಂಮ್‌ ಬೂಟ್‌ಗಳನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಮನುಷ್ಯ ಮುಖ್ಯವಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ಆರೋಗ್ಯಕ್ಕೆ ತೊಂದರೆಯಾದರೆ ದುಷ್ಪರಿಣಾಮ ಎದುರಿಸಬೇಕಾಗುತ್ತದೆ. ಪಟ್ಟಣ ಪಂಚಾಯಿತಿಗೆ ಪೌರ ಕಾರ್ಮಿಕರು ಬಹಳ ದೊಡ್ಡ ಆಸ್ತಿ. ಅವರಿಂದಾಗಿ ಚುನಾಯಿತ ಸದಸ್ಯರುಗಳು ಹೆಚ್ಚಿನ ಒತ್ತಡವನ್ನು ನಿವಾರಣೆ ಮಾಡಿಕೊಂಡಿದ್ದಾರೆ. ಪೌರ ಕಾರ್ಮಿಕರು ಪಟ್ಟಣದ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಾರೆ. ಅವರ ಆರೋಗ್ಯ ಕಾಪಾಡುವುದು ಸರ್ಕಾರದ ಕರ್ತವ್ಯ. ಹಂಚಿಕೆಯಾದ ಪೋಷಾಕುಗಳನ್ನು ಎಲ್ಲಾ ಸಂದರ್ಭದಲ್ಲೂ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಮ್‌, ಪ್ರಭಾರ ತಹಶೀಲ್ದಾರ್‌ ಮಂಜುಳಾ ಭಜಂತ್ರಿ, ಮುಖ್ಯಾಧಿಕಾರಿ ಕುರಿಯಾ ಕೋಸ್‌ ಇದ್ದರು.

ಆಶ್ರಯ ಸಮಿತಿ ಸದಸ್ಯರ ಘೋಷಣೆ

ಬಡ ಕುಟುಂಬಗಳಿಗೆ ಮನೆ ಹಾಗೂ ಸೂಕ್ತ ಸ್ಥಳ ಗುರುತಿಸುವ ಉದ್ದೇಶದಿಂದ ಶಾಸಕರ ಅಧ್ಯಕ್ಷತೆಯಲ್ಲಿ ಆಶ್ರಯ ಸಮಿತಿ ರಚನೆ ಮಾಡಲಾಗಿದ್ದು ಸಮಿತಿಯ ಸದಸ್ಯರಾಗಿ ಕುರುವಳ್ಳಿ ವೈ ಗಣಪತಿ, ಯಡೂರು ಸುರೇಂದ್ರ, ಸವಿತಾ ಉಮೇಶ್‌, ಅನಿತಾ ಪೆರವೊ ಅವರನ್ನು ನೇಮಿಸಲಾಗಿದೆ.

ಪತ್ರಕರ್ತರಿಗೆ ನಿರ್ಬಂಧ

ಎಲ್ಲಾ ಪತ್ರಕರ್ತರಿಗೆ ಪಟ್ಟಣದ ಆಶ್ರಯ ಸಮಿತಿ ಸಭೆಗೆ ಮುಖ್ಯಾಧಿಕಾರಿ ಕುರಿಯಾ ಕೋಸ್‌ ಆಹ್ವಾನಿಸಿದ್ದರು. ಆದರೆ ಪೋಷಾಕುಗಳ ವಿತರಣೆ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಗೃಹಸಚಿವ ಆರಗ ಜ್ಞಾನೇಂದ್ರ ಉಳಿದವರು ಹೊರಗೆ ಹೋಗಬಹುದು ಎಂದರು. ಆಶ್ರಯ ಸಮಿತಿ ಸಭೆಗೆಂದು ತೆರಳಿದ್ದ ಎಲ್ಲಾ ಪತ್ರಕರ್ತರಿಗೂ ಸಭೆ ನಿರ್ಭಂದಿಸಲಾಗಿತ್ತು. ಈ ಹಿಂದೆ ಆಶ್ರಯ ಸಮಿತಿ ಸಭೆ ಪತ್ರಕರ್ತರ ಉಪಸ್ಥಿತಿಯಲ್ಲಿ ನಡೆಯುತ್ತಿತ್ತು. ಆದರೆ ಹೊಸ ಸಮಿತಿಯಲ್ಲಿ ಯಾಕೆ ಅವಕಾಶ ಸಿಕ್ಕಿಲ್ಲ ಎಂಬ ಪ್ರಶ್ನೆ ಸಭೆಯಲ್ಲಿ ಹಾಜರಿದ್ದ ಸಾರ್ವಜನಿಕರು, ಪಟ್ಟಣ ಪಂಚಾಯಿತಿ ಸದಸ್ಯರಿಗೆ ಪ್ರಶ್ನೆಯಾಗಿ ಉಳಿದಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post