ಕ್ಷುಲ್ಲಕ ಕಾರಣಕ್ಕೆ ಹಲ್ಲೆ

ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಹಲ್ಲೆ
ಆರೋಪಿಗಳ ವಿರುದ್ಧ ಎಫ್‌ಐಆರ್‌

ಹಲ್ಲೆಗೊಳಗಾದ ಸದಸ್ಯ ಸಚಿನ್‌ ಅವರಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಒಕ್ಕೂಟದ ಅಧ್ಯಕ್ಷ ಬಿ.ಆರ್‌. ಮೋಹನ್‌, ಕಜಾಂಚಿ ಮಧುರಾಜ್‌ ಹೆಗ್ಡೆ, ಮಧ್ಯಮ ಸಲಹೆಗಾರ ಅರುಣ್‌ ಮಲ್ಲೇಸರ ಮಾಹಿತಿ ಪಡೆದರು.

ಮುಳುಬಾಗಿಲು ಗ್ರಾಮ ಪಂಚಾಯಿತಿಯ 15ನೇ ಹಣಕಾಸಿನಲ್ಲಿ ಮಂಜೂರಾದ 95 ಸಾವಿರ ಮೊತ್ತದ ಕಾಂಕ್ರಿಟ್ ರಸ್ತೆ ಕಾಮಗಾರಿ ವೇಳೆ ಕ್ಷುಲ್ಲಕ ಕಾರಣಕ್ಕೆ ಘರ್ಷಣೆ ಏರ್ಪಟ್ಟಿದೆ. ಸಿದ್ದೇಶ್ವರ ಬಡವಾಣೆಯಲ್ಲಿ ನಡೆಯುತ್ತಿದ್ದ ಕಾಮಗಾರಿ ವೀಕ್ಷಣೆ ವೇಳೆ ಗ್ರಾ.ಪಂ. ಸದಸ್ಯನ ಮೇರೆ ಐವರು ಯುವಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

7 ರಿಂದ 6 ಅಡಿ ಅಗಲದ ಚಿಕ್ಕ ರಸ್ತೆ ಕಾಮಗಾರಿ ವೇಳೆ ಒಂದು ಗುಂಪು ವಾಹನ ಓಡಾಡದ ಹಾಗೆ ಮೆಟ್ಟಿಲು ಮಾಡುವಂತೆ ಒತ್ತಾಯಿಸಿದೆ. ಗ್ರಾಮಸ್ತರು ಇದನ್ನು ವಿರೋಧಿಸಿದ್ದಾರೆ. ಬೆಳಗ್ಗಿನಿಂದ ಕಾಮಗಾರಿ ವೀಕ್ಷಣೆ ನಡೆಸುತ್ತಿದ್ದ ಗ್ರಾಮ ಪಂಚಾಯಿತಿ ಸದಸ್ಯ ಸಚಿನ್‌ ಮಧ್ಯಸ್ಥಿಕೆ ವಹಿಸಿ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ್ದಾರೆ. ಇದನ್ನು ಸಹಿಸದ ಪರಾಜಿತ ವ್ಯಕ್ತಿ ಹಾಗೂ ಪುಡಾರಿಗಳು ಹಲ್ಲೆಗೆ ಮುಂದಾಗಿದ್ದಾರೆ.



ಹಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸಚಿನ್ ಎದೆಯ ಭಾಗ ಮತ್ತು ಕಾಲು ತೀವ್ರವಾದ ಗಾಯಗಳಾಗಿದೆ. ಚಿಕಿತ್ಸೆಗಾಗಿ ತಾಲ್ಲೂಕು ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿನ್ ದೂರಿನಂತೆ ಮಹಮ್ಮದ್  ಇಲಿಯಾಸ್, ಫೈಸಲ್, ಫೈರೋಜ್ ಮತ್ತು ಸಮದ್ ಮೇಲೆ ತೀರ್ಥಹಳ್ಳಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಹಲ್ಲೆ ನಡೆಸಿದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post