ಸರ್ಜಿ ಆಸ್ಪತ್ರೆಗೆ ಹೆಲ್ತ್‌ ಕೇರ್‌ ಅವಾರ್ಡ್‌

ಬೆಸ್ಟ್‌ ಮದರ್‌ ಚೈಲ್ಡ್‌ ಆಸ್ಪತ್ರೆ
ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ

ಮಾಧ್ಯಮ ಕ್ಷೇತ್ರದ ಬಹುದೊಡ್ಡ ಸಂಸ್ಥೆ, ಪ್ರತಿಷ್ಠಿತ ಸಿಎನ್‌ಎನ್‌ ನ್ಯೂಸ್‌ 18 ಚಾನಲ್‌ ರಾಜ್ಯದಲ್ಲೇ ಬೆಸ್ಟ್ ಮದರ್‌ ಆ್ಯಂಡ್‌ ಚೈಲ್ಡ್ ಕೇರ್‌ ವಿಭಾಗದಲ್ಲಿ ಗಣನೀಯ ಸೇವೆ ಗುರುತಿಸಿ ಅತ್ಯುತ್ತಮ ಹೆಲ್ತ್ಕೇರ್‌ ಅವಾರ್ಡ್‌ 22 ಅನ್ನು ನಗರದ ಪ್ರತಿಷ್ಠಿತ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ನೀಡಿದೆ.


ರಾಜ್ಯದಲ್ಲೇ ಉತ್ತಮ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಾಗಿ ಆರೋಗ್ಯ ಕ್ಷೇತ್ರದಲ್ಲಿ ಕೊಡ ಮಾಡುವ ಪ್ರಶಸ್ತಿಗೆ ನಗರದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಆಯ್ಕೆಯಾಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಆರೋಗ್ಯ ಸಲಹೆಗಾರರಾದ ಮೇಜರ್‌ ಡಾ. ವಿ. ಪ್ರಸಾದ್‌, ಬೆಂಗಳೂರು ಜಯದೇವ ಹೃದ್ರಯಲಯದ ಮುಖ್ಯಸ್ಥರಾದ ಡಾ.ಮಂಜುನಾಥ್‌, ಡಾ.ಅಂಜಲಿ ನಿಂಬಾಳ್ಕರ್‌ ಅವರನ್ನೊಳಗೊಂಡ ತಜ್ಞರ ಸಮಿತಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.


ಸರ್ಜಿ ತಾಯಿ ಮಕ್ಕಳ ಆಸ್ಪತ್ರೆಯು ಪ್ರತಿ ವರ್ಷ 2 ಲಕ್ಷ ಒಪಿಡಿ, 15 ಸಾವಿರ ಐಪಿಡಿ , 2500 ಸಾವಿರ ಹೆರಿಗೆ ಮಾಡಿಸಿದ ಹೆಗ್ಗಳಿಕೆ ಹೊಂದಿದೆ. ರೋಗಿಗಳಿಗೆ ಎಲ್ಲ ರೀತಿಯ ಸುಸಜ್ಜಿತ ಸೌಲಭ್ಯ ಒದಗಿಸುತ್ತ ಬಂದಿದೆ.

ಸರ್ಜಿ ಆಸ್ಪತ್ರೆಯ ವಿಶೇಷತೆ ಎಂದರೆ ನೆರೆಯ ಹಲವಾರು ಜಿಲ್ಲೆಯ ರೋಗಿಗಳಿಗೆ ಲೆವೆಲ್‌ ತ್ರೀ (ಹೆಲ್ತ್ಕೇರ್‌) ಸೇವೆ ನೀಡುತ್ತಾ ಬಂದಿದೆ. ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಶಿರಸಿ, ಸಿದ್ದಾಪುರ ಹಾಗೂ ಅರಸಿಕೆರೆ ಭಾಗದ ರೋಗಿಗಳಿಗೆ ಕಳೆದ 8 ವರ್ಷಗಳಿಂದ ಉತ್ಕೃಷ್ಠ ಗುಣಮಟ್ಟ ಸೇವೆ ಮತ್ತು ಕಡಿಮೆ ದರದಲ್ಲಿ ಉತ್ತಮ ಸೇವೆಯನ್ನು ನೀಡುತ್ತಿದೆ.

ಹುಟ್ಟಿದ ಮಗುವಿನಿಂದ ಹಿಡಿದು 18 ವರ್ಷದವರೆಗಿನ ಮಕ್ಕಳಿಗೆ ಎಲ್ಲ ತರಹದ ಚಿಕಿತ್ಸೆಯನ್ನು ಒಂದೇ ಸೂರಿನ ನೀಡುತ್ತಿರುವುದು ಆಸ್ಪತ್ರೆಯ ಹೆಗ್ಗಳಿಕೆಯಾಗಿದೆ. ಮಕ್ಕಳ ವಿಭಾಗದ 10 ಮಂದಿ ಮಕ್ಕಳ ತಜ್ಞ ವೈದ್ಯರು, 5 ಮಂದಿ ಪ್ರಸೂತಿ ತಜ್ಞ ವೈದ್ಯರು ಒಂದೇ ಸೂರಿನಡಿ ಲಭ್ಯವಿದ್ದು, ಲಕ್ಷಾಂತರ ರೋಗಿಗಳಿಗೆ ಸೇವೆ ಒದಗಿಸುತ್ತ್ಲಾ ಬಂದಿದ್ದಾರೆ. ಈ ಎಲ್ಲ ಸೇವೆಗಳ ಉತ್ತಮ ಗುಣಮಟ್ಟವನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಭಾನುವಾರ ನಡೆದ ಅದ್ದೂರಿ ಸಮಾರಂಭದಲ್ಲಿ ಸರ್ಜಿ ಗ್ರೂಪ್‌ ಆಪ್‌ ಹಾಸ್ಪಿಟಲ್‌ನ ಚೇರ್ಮನ್‌ ಡಾ. ಧನಂಜಯ ಸರ್ಜಿ ಅವರಿಗೆ ಪ್ರಶಸ್ತಿಯನ್ನು ರಾಜ್ಯ ಸಹಕಾರ ಸಚಿವ ಸೋಮಶೇಖರ್‌ ಪ್ರದಾನ ಮಾಡಿದರು. ಸಮಾರಂಭದಲ್ಲಿ ರಾಜ್ಯ ಕಂದಾಯ ಸಚಿವ ಆರ್‌.ಅಶೋಕ್‌, ಆರೋಗ್ಯ ಸಚಿವ ಡಾ.ಸುಧಾಕರ್‌, ಶಾಸಕರಾದ ದಿನೇಶ್‌ ಗುಂಡೂರಾವ್‌, ಎಂಎಲ್‌ಸಿ ಗೋವಿಂದರಾಜು, ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಶಾಸಕರಾದ ರಿಜ್ವಾನ್‌ ಹರ್ಷದ್‌ ಹಾಜರಿದ್ದರು.

ಬೆಂಗಳೂರಿನಲ್ಲಿ ಭಾನುವಾರ ನಡೆದ ಅದ್ದೂರಿ ಸಮಾರಂಭದಲ್ಲಿ ಸರ್ಜಿ ಗ್ರೂಪ್‌ ಆಪ್‌ ಹಾಸ್ಪಿಟಲ್‌ನ ಚೇರ್ಮನ್‌ ಡಾ. ಧನಂಜಯ ಸರ್ಜಿ ಅವರಿಗೆ ಅತ್ಯುತ್ತಮ ಹೆಲ್ತ್ಕೇರ್‌ ಅವಾರ್ಡ್‌ನ್ನು ರಾಜ್ಯ ಸಹಕಾರ ಸಚಿವ ಸೋಮಶೇಖರ್‌ ಪ್ರದಾನ ಮಾಡಿದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post