"ನನ್ನ ನಾಡಿಗೆ ನನ್ನದೊಂದು ಗಿಡ"
ಅರಣ್ಯ ಇಲಾಖೆ ಅಭಿಯಾನಕ್ಕೆ ಮಕ್ಕಳ ಬಲ
ಲಕ್ಕುಂದಲ್ಲಿ
ವಿದ್ಯಾರ್ಥಿಗಳಿಂದ ವನಮಹೋತ್ಸವ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಹ್ಯಾದ್ರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಮೇಗರವಳ್ಳಿ ವಲಯ ಅರಣ್ಯ ಇಲಾಖೆ ಆಶ್ರಯದಲ್ಲಿ "ನನ್ನ ನಾಡಿಗೆ ನನ್ನದೊಂದು ಗಿಡ" ಎಂಬ ಅಭಿಯಾನವನ್ನು ತೀರ್ಥಹಳ್ಳಿ ತಾಲ್ಲೂಕು ಆಗುಂಬೆ ಹೋಬಳಿಯ ಲಕ್ಕುಂದ ಸಮೀಪ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ವಿವಿಧ ತಳಿಯ ಬೀಜಗಳನ್ನು ಬಿತ್ತನೆ ಮಾಡುವ ಮೂಲಕ ಅರಣೀಕರಣಕ್ಕೆ ಚಾಲನೆ ನೀಡಲಾಯಿತು.
ವಿದ್ಯಾರ್ಥಿಗಳು ಆಸಕ್ತಿಯಿಂದ ಬೀಜಬಿತ್ತನೆ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು. ಅರಣ್ಯ ಇಲಾಖೆ ನರ್ಸರಿಯಲ್ಲಿರುವ ವಿವಿಧ ಸಸ್ಯಗಳನ್ನು ಇಲಾಖೆಯ ಸಿಬ್ಬಂದಿಗಳು ಮಕ್ಕಳಿಗೆ ಪರಿಚಯಿಸುವ ಮೂಲಕ ಪರಿಸರದ ಸಂರಕ್ಷಣೆಯ ಪಾಠ ಮಾಡಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಬಾಳೇಹಳ್ಳಿ ಪ್ರಭಾಕರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಲಯ ಸಹಾಯಕ ಸಂರಕ್ಷಣಾಧಿಕಾರಿ ಪ್ರಕಾಶ್ ಎಚ್.ಎಸ್., ಮೇಗರವಳ್ಳಿ ವಲಯ ಅರಣ್ಯಾಧಿಕಾರಿ ಮಧುಕರ್, ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಯು.ಡಿ. ವೆಂಕಟೇಶ್, ಕೂಳೂರು ಕೃಷ್ಣಮೂರ್ತಿ, ಸಹ್ಯಾದ್ರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗುರುರಾಜ್ ಎಚ್.ಬಿ. ಮತ್ತು ಶಿಕ್ಷಕರು ಭಾಗವಹಿಸಿದ್ದರು.

.jpeg)
