ಕರವೇ ವತಿಯಿಂದ ಮಕ್ಕಳಿಗೆ ಪುಸ್ತಕ, ಜಾಮಿಟ್ರಿ ಬಾಕ್ಸ್
ಟಿ.ಎ. ನಾರಾಯಣ ಗೌಡರ ಜನ್ಮದಿನ ಆಚರಣೆ
ತೀರ್ಥಹಳ್ಳಿ ತಾಲ್ಲೂಕು ಕರವೇ ವತಿಯಿಂದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಕ್ಷ ಟಿ.ಎ.ನಾರಾಯಣ ಗೌಡರ ಹುಟ್ಟುಹಬ್ಬವನ್ನು
ಬೆಟ್ಟಮಕ್ಕಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕ ಹಾಗೂ ಜಾಮೆಟ್ರಿ ಬಾಕ್ಸ್ ವಿತರಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಪಟೇಲ್ ವೆಂಕಟೇಶ್ ಹೆಗ್ಡೆ ಮಾತನಾಡಿ, ಇಪ್ಪತ್ತೈದು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ತಮಿಳು, ತೆಲುಗು ಭಾಷಿಗರಿಂದ ಕನ್ನಡಿಗರ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿದ್ದವು. ನಾರಾಯಣಗೌಡರು ಕರ್ನಾಟಕ ರಕ್ಷಣಾ ವೇದಿಕೆ ಸ್ಥಾಪಿಸಿದ ನಂತರ ಕರ್ನಾಟಕದಲ್ಲಿ ಕನ್ನಡಿಗರು ತಲೆ ಎತ್ತಿ ನಿಂತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸ್ಥಳೀಯರು ಪಟ್ಟಣ ಪಂಚಾಯತ್ ಸದಸ್ಯೆ ಸುಶೀಲಾ ಶೆಟ್ಟಿ, ತಾಲ್ಲೂಕು ಕರವೇ ಉಪಾಧ್ಯಕ್ಷ ಸುರೇಶ್ ಟೈಲರ್, ಕಾರ್ಯದರ್ಶಿ ಮಲ್ಲಕ್ಕಿ ರಾಘವೇಂದ್ರ, ವಿಕ್ರಂ ಶೆಟ್ಟಿ ಬೆಟ್ಟಮಕ್ಕಿ, ನಗರ ಘಟಕ ಅಧ್ಯಕ್ಷ ರವಿ, ಯುವ ಘಟಕದ ಅಧ್ಯಕ್ಷ ಶ್ರೀಕಾಂತ್ ಬೆಟ್ಟಮಕ್ಕಿ, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ದಿಲೀಪ್, ಲಕ್ಷ್ಮಿದೇವಿ ಹಾಗೂ ಶಕುಂತಲಾ, ಯುವ ಘಟಕ ಪ್ರಧಾನ ಕಾರ್ಯದರ್ಶಿ ಮಹೇಶ್ ಬೆಟ್ಟಮಕ್ಕಿ, ಅರ್ಜುನ್ ಬಾಳೆಬೈಲು, ಸುನೀಲ್ ಗೌಡ ಬೆಟ್ಟಮಕ್ಕಿ, ಕಟ್ಟೆ ಕರಣ್, ನಿಶಾಲ್ ಡಿಸೋಜಾ ಚಿಟ್ಟೇಬೈಲು, ಅರುಣ್ ಬೋರ್ಡ್ಗಲ್ಲು ಇದ್ದರು.