ರೈತರು ಮಾಹಿತಿ ಪಡೆಯುವುದರಲ್ಲಿ ಹಿಂದೆ ಬಿದ್ದಿದ್ದಾರೆ

ಯೋಜನೆಗಳ ಉಪಯೋಗ ಆಗಬೇಕಿದೆ
ತಜ್ಞರ ಮಾಹಿತಿ ಅಗತ್ಯವಾಗಿ ಪಡೆಯಿರಿ – ಆರಗ ಜ್ಞಾನೇಂದ್ರ ಸಲಹೆ

ಶುಕ್ರವಾರ ತೀರ್ಥಹಳ್ಳಿ ತಾಲ್ಲೂಕು ಕಚೇರಿ ಮುಂಭಾಗ ಗೃಹಸಚಿವ ಆರಗ ಜ್ಞಾನೇಂದ್ರ ಕೃಷಿ ಇಲಾಖೆಯ "ಕೃಷಿ ಸಂಜೀವಿನಿ" ಲ್ಯಾಬ್‌ ಟು ಲ್ಯಾಂಡ್‌ ವಾಹನಕ್ಕೆ ಚಾಲನೆ ನೀಡಿದರು.

ಬೇರೆಲ್ಲಾ ಇಲಾಖೆಗಳಿಗೆ ಹೋಲಿಸಿದರೆ ಕೃಷಿ ಇಲಾಖೆಯ ಮಾಹಿತಿ ಬಹಳ ನಿಧಾನವಾಗಿ ರೈತರು ಪಡೆಯುತ್ತಿದ್ದಾರೆ. ಸವಲತ್ತು ಪಡೆದವರು ಪಕ್ಕದವರಿಗೆ ತಿಳಿಸದಂತೆ ಮುಚ್ಚುಮರೆ ಮಾಡುತ್ತಿದ್ದಾರೆ. ನರೇಂದ್ರ ಮೋದಿ ಜಮಾ ಮಾಡಿದ 10 ಸಾವಿರ ಹಣ ಪಡೆದವರು ಯಾರು ಎಂದು ಕೇಳಿದಾಗ ನಿಧಾನವಾಗಿ ಒಬ್ಬೊಬ್ಬರೇ ಕೈಎತ್ತುತ್ತಾರೆ ಎಂದು ವಿನೋದವಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಒಬ್ಬರ ಮಾಹಿತಿ ಮತ್ತೊಬ್ಬರು ಹಂಚಿಕೊಂಡಾಗ ಆಧುನಿಕ ಕೃಷಿ ವಿಸ್ತರಣೆ ಆಗುತ್ತದೆ. ತಜ್ಞರು ಜಮೀನಿಗೆ ಅಗತ್ಯವಾದ ಔಷಧೋಪಚಾರ, ಬೆಳೆ, ಧನಸಹಾಯ ಮುಂತಾದ ಮಾಹಿತಿ ನೀಡುತ್ತಾರೆ. ಅವರಿಂದ ಮಾಹಿತಿ ಪಡೆದುಕೊಂಡು ಹೆಚ್ಚು ಜನರಿಗೆ ತಿಳಿಸುವ ಕಾರ್ಯ ಆಗಬೇಕು ಎಂದರು.

ರೈತರು ಕೈಸುಟ್ಟುಕೊಳ್ಳಬಾರದು ಅಂತ ಬೆಳೆವಿಮೆ ಮಾಡಿದ್ದಾರೆ. ಭತ್ತಕ್ಕೆ ಆಗಸ್ಟ್‌ 16, ಅಡಿಕೆಗೆ 31 ಜೂನ್‌ ಒಳಗಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬಹುದು. ರೈತರ ಬದುಕನ್ನು ಹಸನು ಮಾಡುವ ಕೆಲಸ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ನಡೆಯುತ್ತಿದೆ. ಮಣ್ಣಿನ ಪರೀಕ್ಷೆಗಾಗಿ ನೂತನ ವಾಹನ ನೀಡಿದ್ದೇವೆ ಎಂದು ಆರಗ ಜ್ಞಾನೇಂದ್ರ ಹೇಳಿದರು.





ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post