ಸಾಲೂರು ಶಿವಕುಮಾರ್‌ ಗೌಡ ಆಮ್‌ ಆದ್ಮಿಗೆ ಸೇರ್ಪಡೆ

ದೆಹಲಿಯಲ್ಲಿ ಪಕ್ಷಕ್ಕೆ ಎಂಟ್ರಿ ಕೊಟ್ಟ ನಾಯಕರು

ತೀರ್ಥಹಳ್ಳಿಯಲ್ಲಿ ಹೊಸ ರಾಜಕೀಯದ ಕಾವು...

ಅವಳಿ ಜಿಲ್ಲೆಯ ರಾಯಭಾರಿ ಆಗುವರೇ..?

ಸುಪ್ರೀಂ ಕೋರ್ಟ್ ವಕೀಲ ತೀರ್ಥಹಳ್ಳಿ ತಾಲೂಕಿನ ಸಾಲೂರು ಗ್ರಾಮದ ಸಾಲೂರು ಶಿವಕುಮಾರ್ ಗೌಡ ಹಾಗೂ ಚಿಕ್ಕಮಗಳೂರು ವಿಧಾನಸಭಾ  ಕ್ಷೇತ್ರದ ಮಾಜಿ ಶಾಸಕ ಐ.ಬಿ. ಶಂಕರ್ ಮಗ ಹೆಸರಾಂತ ವಕೀಲ ಐ.ಎಸ್. ತೇಜಸ್ವಿ ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಕರ್ನಾಟಕ ಚುನಾವಣಾ ಪ್ರಭಾರಿ ದಿಲೀಪ್ ಪಾಂಡೆ ಸಮ್ಮುಖದಲ್ಲಿ ದೆಹಲಿಯ ಕಛೇರಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಅಧೀಕೃತವಾಗಿ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲಾ ಯುವ ಅಧ್ಯಕ್ಷ ಪವನ್ ಉಪಸ್ಥಿತರಿದ್ದರು. ಈ ಇಬ್ಬರು ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಎರಡು ಅವಳಿ ಜಿಲ್ಲೆಯಲ್ಲಿ ಹೊಸ ರಾಜಕೀಯ ಸಂಚಲನಕ್ಕೆ ಸಾಕ್ಷಿಯಾಗಲಿದೆ ಎಂದು ದಿಲೀಪ್ ಪಾಂಡೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.




ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post