ಬೀಜ ಬಿತ್ತನೆ ಕಾರ್ಯಕ್ರಮಕ್ಕೆ ಚಾಲು
ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಕ್ರಮ
ಮುಳುಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಗುಂಬೆ ವಲಯಾರಣ್ಯ ವಿಭಾಗ ಭಾನುವಾರ, ಸೋಮವಾರ ವಿವಿಧ ಗ್ರಾಮದಲ್ಲಿ ಬೀಜಬಿತ್ತನೆ ಅಭಿಯಾನ ಕಾರ್ಯಕ್ರಮ ನಡೆಸಿತು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆರಂಭವಾಗಿರುವ ಬೀಜ ಬಿತ್ತನೆ ಕಾರ್ಯಕ್ರಮ ಪ್ರತಿ ಗ್ರಾಮದಲ್ಲೂ ಯಶಸ್ವಿ ಆಗಿಸಲು ಅರಣ್ಯ ಇಲಾಖೆ ಮಹತ್ವದ ಕಾರ್ಯಯೋಜನೆ ರೂಪಿಸಿದೆ. ಇದರಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಿಕೆ ಹೆಚ್ಚಿದೆ.
ಮುಳುಬಾಗಿಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಆರ್. ಮೋಹನ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಗೀತಾ ಶೆಟ್ಟಿ, ಆಗುಂಬೆ ವಲಯಾರಣ್ಯಧಿಕಾರಿ ಮಧುಕರ್, ಉಪ ವಲಯಾರಣ್ಯಧಿಕಾರಿಗಳಾದ ಸುನಿಲ್, ಕಿರಣ್ ಕುಮಾರ್, ಅನಿಲ್, ಗಣೇಶ್, ಬಿಳಾಲುಕೊಪ್ಪ ಶಾಲಾ ವಿದ್ಯಾರ್ಥಿಗಳು, ಮುಳುಬಾಗಿಲು ಗ್ರಾಮ ಪಂಚಾಯಿತಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.