ಆರೋಗ್ಯಕ್ಕೆ ಯೋಗ ಯೋಗ್ಯ ಮಾರ್ಗ

 
ಒತ್ತಡದಿಂದ ರೋಗ ಹೆಚ್ಚುತ್ತಿದೆ. ಯುವ ಜನತೆ ಆರೋಗ್ಯವಾಗಿರಲು ಯೋಗ ಯೋಗ್ಯವಾದ ಮಾರ್ಗ. ಪ್ರತಿಯೊಬ್ಬರು ಯೋಗಭ್ಯಾಸ ರೂಢಿ ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್‌ ಮಂಜುಳಾ ಭಜಂತ್ರಿ ಸಲಹೆ ನೀಡಿದರು.

ಮಂಗಳವಾರ ಪಟ್ಟಣದ ಗಾಯತ್ರಿ ಮಂದಿರದಲ್ಲಿ ಕೇಂದ್ರ, ರಾಜ್ಯ ಸರ್ಕಾರ, ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಆಯುಷ್‌ ಇಲಾಖೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ, ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಯೋಗ ಮಾಡುವುದರಿಂದ ದುಶ್ಚಟದಿಂದ ದೂರ ಸರಿಯಬಹುದು. ಮಾನಸಿಕ ದೃಢತೆ, ದೈಹಿಕ ಕ್ಷಮತೆ ಕಾಪಾಡಿಕೊಂಡು ಒತ್ತಡದಿಂದ ಮುಕ್ತಿ ಪಡೆಯಬಹುದು. ವೇಗದ ಜೀವನಕ್ಕೆ ಹೊಂದಿಕೊಂಡಿರುವ ಯುವ ಜನತೆ ರೋಗಕ್ಕೆ ತುತ್ತಾಗುತ್ತಿದ್ದು ನಿಯಂತ್ರಣದ ಮಾರ್ಗವಾಗಿ ಯೋಗ ಇದೆ ಎಂದರು.

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ವಿ. ಸತೀಶ್‌ ಶೆಟ್ಟಿ ಮಾತನಾಡಿದರು. ಡಾ. ನಮಿತಾ ಉಡುಪ ಯೋಗ ಕುರಿತು ಉಪನ್ಯಾಸ ನೀಡಿದರು. ನೋಡಲ್‌ ಅಧಿಕಾರಿ ಡಾ. ರವಿಶಂಕರ್‌ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ವಿಜೇತರಾದ ಗಾನಶ್ರೀ, ವರ್ಷ, ನಾಗಸುಧೆ, ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಅನ್ವಿತಾ ಭಟ್‌, ರಾಹಿಲ, ಶೃಂಗ ಅವರುಗಳಿಗೆ ಆಯುಷ್‌ ಇಲಾಖೆ ವತಿಯಿಂದ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಮ್‌, ಉಪಾಧ್ಯಕ್ಷ ಜಯಪ್ರಕಾಶ ಶೆಟ್ಟಿ,, ಮುಖ್ಯಾಧಿಕಾರಿ ಕುರಿಯಕೋಸ್‌, ತಾಲ್ಲೂಕು ವೈದ್ಯಾಧಿಕಾರಿ ಡಾ. ನಟರಾಜ್‌, ಜೆಸಿಐ ಅಧ್ಯಕ್ಷೆ ವಿನುತಾ ಮುರುಳೀಧರ್‌ ಮತ್ತಿತರರು ಇದ್ದರು. ಡಾ. ಗಣೇಶ್‌ ಕಾಮತ್‌ ಸ್ವಾಗತಿಸಿದರು. ಡಾ. ಸುಚಿತ್ರಾ ವಂದಿಸಿದರು. ಹಿರಿಯ ಪಶು ವೈದ್ಯಾಧಿಕಾರಿ ಡಾ. ಮುರುಳೀಧರ್‌ ನಿರೂಪಿಸಿದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post