ನೂಪೂರ್‌ ಶರ್ಮಾ ಹೇಳಿಕೆಯಿಂದ ಹಿಂಸಾಚಾರ ಹೆಚ್ಚಳ

ಸುಪ್ರೀಂ ಕೋರ್ಟ್‌ ಗರಂ

ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಬಗ್ಗೆ ವಿವಾದಿತ ಹೇಳಿಕೆ ನೀಡಿ ದೇಶದಲ್ಲಿ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆಂದು ಬಿಜೆಪಿ ಉಚ್ಚಾಟಿತ ವಕ್ತಾರೆ ನೂಪುರ್ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನಿಮ್ಮ ಹೇಳಿಕೆಗಾಗಿ ಇಡೀ ದೇಶ ಕ್ಷಮೆಯಾಚಿಸಬೇಕು ಎಂದು ಶರ್ಮಾಗೆ ಕೋರ್ಟ್ ತಾಕೀತು ಮಾಡಿದೆ.

ಪ್ರವಾದಿ ಅವರ ಬಗ್ಗೆ ಶರ್ಮಾ ನೀಡಿದ ವಿವಾದಾತ್ಮಕ ಹೇಳಿಕೆಗೆ ಗಲ್ಫ್ ರಾಷ್ಟ್ರಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಅಲ್ಲದೇ ದೇಶದಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. ಇದೇ ಕಾರಣಕ್ಕೆ ರಾಜಸ್ಥಾನ ಉದಯಪುರದಲ್ಲಿ ಬೀಕರ ಘಟನೆ ನಡೆದಿತ್ತು. ಈ ಸಂಬಂಧ ಈಗ ನಡೆಯುತ್ತಿರುವ ಹಿಂಸಾಚಾರ ದುರ್ಘಟನೆಗಳಿಗೆ ನೂಪುರ್ ಶರ್ಮಾ ಅವರ ಹೇಳಿಕೆಯೇ ಕಾರಣ ಎಂದು ಸುಪ್ರೀಂ ತರಾಟೆಗೆ ತೆಗೆದುಕೊಂಡಿದೆ.

ಆಕೆಯ ಪ್ರಚೋದನಕಾರಿ ಹೇಳಿಕೆಗಳನ್ನು ನಾವು ನೋಡಿದ್ದೇವೆ. ಆದರೆ ಆಕೆ ಇದನ್ನೆಲ್ಲ ಹೇಳಿದ ರೀತಿ ಮತ್ತು ನಂತರ ತಾನು ವಕೀಲೆ ಎಂದು ಹೇಳಿಕೊಂಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ.

ನೂಪುರ್ ಶರ್ಮಾ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ದೆಹಲಿಗೆ ವರ್ಗಾಯಿಸುವಂತೆ ಸಲ್ಲಿಸಿದ ಮನವಿಗೆ ಸುಪ್ರೀಂ ಈ ರೀತಿ ಪ್ರತಿಕ್ರಿಯಿಸಿದೆ.

ನೂಪುರ ಶರ್ಮಾ ಹೇಳಿಕೆ ಹಿಂತೆಗೆದುಕೊಂಡಿದ್ದು ಬಹಳ ತಡವಾಗಿದೆ. ಶರ್ಮಾ ದೂರಿನ ಆಧಾರದ ಮೇಲೆ ಓರ್ವ ವ್ಯಕ್ತಿಯ ಬಂಧನವಾಗಿದೆ. ನೂಪುರ್ ಶರ್ಮಾ ಬಂಧನ ಏಕಾಗಿಲ್ಲ? ನೂಪೂರ್ ಶರ್ಮಾ ವಿರುದ್ಧ ಅನೇಕ ಎಫ್‌ಐಆರ್ ದಾಖಲಾದರೂ ಬಂಧನವಾಗಿಲ್ಲ. ದೇಶದ ಭದ್ರತೆಗೆ ಧಕ್ಕೆ ಉಂಟಾಗಿದೆ ಎಂದು ಕೋರ್ಟ್ ಗರಂ ಆಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post