ಶೃಂಗೇರಿಯಲ್ಲಿ ಪತ್ರಕರ್ತ ಶಬರೀಶ್‌ ಮೇಲೆ ಹಲ್ಲೆ

ಜೀವ ಬೆದರಿಕೆ ಹಾಕಿದರೇ ಜೀವರಾಜ್‌ ಬೆಂಬಲಿಗರು..?
ಪತ್ರಿಕೆ ಹಂಚುವ ವೇಳೆ ಹಲ್ಲೆ

ಶೃಂಗೇರಿ ತಾಲ್ಲೂಕಿನ ನಮ್ಮೂರ ವಾರ್ತೆ ಪತ್ರಿಕಾ ವರದಿಗಾರ ಶಬರೀಶ್‌ ಮೇಲೆ ಬಿಯರ್‌ ಬಾಟಲ್‌ ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಪಟ್ಟಣದಲ್ಲಿ ಪತ್ರಿಕೆ ಹಂಚುವ ವೇಳೆ ಜೀವರಾಜ್‌ ಬೆಂಬಲಿಗರು ಎನ್ನಲಾದ ಸಂಪೆಕೊಳಲು ಸುನಿಲ್‌ ಹಾಗೂ ಕಾಂಚಿನಗರ ಭರತ್‌ ಹಲ್ಲೆ ನಡೆಸಿದ್ದು ಶಬರೀಶ್‌ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇರ್ವರು ರಸ್ತೆ ಅಡ್ಢಗಟ್ಟಿ ಶಬರೀಶ್‌ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. “ಎಸ್‌ಸಿ ಸೂ…ಮಗನೆ ನೀನು ಶೃಂಗೇರಿಯಲ್ಲಿ ರಾಜಕೀಯ ಮಾಡ್ತೀಯಾ..! ಹರೀಶ್‌ ಶೆಟ್ಟಿ, ಜೀವರಾಜ್‌ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಬರಿತೀಯಾ..” ಎಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿದೆ,

ಆದರೆ ಪೊಲೀಸರು ಹಲ್ಲೆಗೊಳಗಾದ ವ್ಯಕ್ತಿಯ ಮೇಲೆ ದೂರುಗಳನ್ನು ದಾಖಲು ಮಾಡಿದ್ದು ಸರ್ಕಾರದ ಅಂಗ ಸಂಸ್ಥೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪತ್ರಕರ್ತ, ಗ್ರಾ.ಪಂ. ಸದಸ್ಯ ಶಬರೀಶ್‌ ಆರೋಪಿಸಿದ್ದಾರೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post