ಸಂಮೃದ್ದಿಯ ಸಂಕೇತವಾಗಿ ಬಾಗೀನ ಅರ್ಪಣೆ
ತೀರ್ಥಹಳ್ಳಿ ರಾಮೇಶ್ವರ ದೇವಸ್ಥಾನದ ಸಮೀಪ ಉಕ್ಕಿ ಹರಿಯುತ್ತಿರುವ ತುಂಗಾ ನದಿಗೆ ಗೃಹಸಚಿವ ಆರಗ ಜ್ಞಾನೇಂದ್ರ ಗಂಗಾಪೂಜೆ ಸಲ್ಲಿಸಿ ತುಂಗಾ ನದಿಗೆ ಬಾಗೀನ ಅರ್ಪಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಮ್, ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಸದಸ್ಯರಾದ ಸಂದೇಶ ಜವಳಿ, ಸೊಪ್ಪುಗುಡ್ಡೆ ರಾಘವೇಂದ್ರ, ಜ್ಯೋತಿ ಮೋಹನ್, ಗೀತಾ, ಜ್ಯೋತಿ ಗಣೇಶ್, ಮುಖ್ಯಾಧಿಕಾರಿ ಕುರಿಯಕೊಸ್, ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ, ಉಪ ವಿಭಾಗಾಧಿಕಾರಿ ದೊಡ್ಡಗೌಡ, ತಹಶೀಲ್ದಾರ್ ಅಮೃತ್ ಅತ್ರೇಶ್, ಬಿಜೆಪಿ ಅಧ್ಯಕ್ಷ ಬಾಳೇಬೈಲು ರಾಘವೇಂದ್ರ, ಟಿಎಪಿಸಿಎಂಎಸ್ ಅಧ್ಯಕ್ಷ ನಾಗರಾಜ ಶೆಟ್ಟಿ ಮುಂತಾದವರು ಇದ್ದರು.