ಆಂಬುಲೆನ್ಸ್‌ ಬೀಕರ ಅಪಘಾತ

ರೋಗಿಯೊಂದಿಗೆ ನಾಲ್ವರ ಸಾವು
ಟೋಲ್ ಗೇಟ್ ಗೆ ಅಪ್ಪಳಿಸಿದ ವಾಹನ

ಕಾರವಾರ ಜಿಲ್ಲೆಯ ಹೊನ್ನಾವರದಿಂದ ರೋಗಿಯನ್ನು ಚಿಕಿತ್ಸೆಗೆ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್‌ ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಶಿರೂರು ಟೋಲ್ ಗೇಟ್‌ ನಲ್ಲಿ ಪಲ್ಟಿಯಾಗಿ ಟೋಲ್ ಗೇಟ್ ನಲ್ಲಿರುವ ಕಂಬಕ್ಕೆ ಅಪ್ಪಳಿಸಿದೆ, ಅಪಘಾತದ ತೀವ್ರತೆಗೆ ನಾಲ್ವರು ಮೃತಪಟ್ಟಿದ್ದಾರೆ.

ಈ ಭೀಕರ ಅಪಘಾತದಲ್ಲಿ ಟೋಲ್ ಸಿಬ್ಬಂದಿಗಳೂ ಗಂಭೀರ ಗಾಯಗೊಂಡಿದ್ದಾರೆ. ಗಜಾನನ ನಾಯ್ಕ ಎಂಬವರನ್ನು ಸಂಬಂಧಿಕರು ಉಡುಪಿ ಜಿಲ್ಲೆಯ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಈ ದುರಂತ ನಡೆದಿದೆ, ಆಂಬ್ಯುಲೆನ್ಸ್ ಹೊನ್ನಾವರದ ಶ್ರೀದೇವಿ ಆಸ್ಪತ್ರೆಗೆ ಸೇರಿದ್ದಾಗಿದೆ.
ಮೃತರನ್ನು ಹಾಡಗೇರಿಯ ಮಂಜುನಾಥ ನಾಯ್ಕ, ಲೋಕೇಶ್ ನಾಯ್ಕ, ಜ್ಯೋತಿ ನಾಯ್ಕ ಮತ್ತು ಬಳಕೂರಿನ ಗಜಾನನ ನಾಯ್ಕ ಎಂದು ಗುರುತಿಸಲಾಗಿದೆ.

ಆಂಬುಲೆನ್ಸ್ ವೇಗವಾಗಿ ಬಂದು ಪಲ್ಟಿಯಾಗುವ ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿಗಳು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post