ಸುಳುಗೋಡು ಗ್ರಾಮ ಬಾಳೇಹಿತ್ಲುನಲ್ಲಿ ದುರ್ಘಟನೆ
ಕುಟುಂಬ ನಿರ್ವಹಣೆ ಮಾಡುತ್ತಿದ್ದ ರೈತ ಮಹಿಳೆ ಭವಾನಿ
ಭಾನುವಾರ ಬೆಳಗ್ಗೆ ತೋಟಕ್ಕೆಂದು ಹೋದ ರೈತ ಮಹಿಳೆ ಭವಾನಿ ಶಂಕರ್ ನಾರಾಯಣ(52) ಎಂಬುವವರು ಹಳ್ಳಕ್ಕೆ ಬಿದ್ದು ಸಾವನಪ್ಪಿರುವರುವ ದುರ್ಘಟನೆ ಸುಳುಗೋಡು ಗ್ರಾಮದಲ್ಲಿ ನಡೆದಿದೆ.
ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳುಗೋಡು ಗ್ರಾಮದ ಬಾಳೆಹಿತ್ಲು ಹಳ್ಳದಲ್ಲಿ ಭವಾನಿ ಅವರು ಎಂದಿನಂತೆ ಬೆಳಿಗ್ಗೆ ತೋಟಕ್ಕೆ ಹೋಗಿದ್ದರೆ.
ಸಂಜೆಯವರೆಗೂ ಮನೆಗೆ ಬಾರದಿದ್ದಾಗ ಕುಟುಂಬದವರು ಇವರನ್ನು ಹುಡುಕಲು ಪ್ರಾರಂಭಿಸಿದ್ದು ಎಷ್ಟೇ ಹುಡುಕಿದರೂ ಇವರ ಸುಳಿವು ಸಿಗಲಿಲ್ಲ. ತಡರಾತ್ರಿಯವರೆಗೂ ಹುಡುಕಿದಾಗ ರಾತ್ರಿ ಹನ್ನೊಂದರ ಸಮಯಕ್ಕೆ ಹಳ್ಳದಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಗ್ರಾಮ ಪಂಚಾಯತಿ ಸದಸ್ಯರಾದ ಅಣ್ಣಪ್ಪ ಹಾಗೂ ಗ್ರಾಮಸ್ಥರು ಮೃತದೇಹವನ್ನು
ಮರಣೋತ್ತರ ಪರೀಕ್ಷೆಗೆ ಜೆಸಿ ಆಸ್ಪತ್ರೆಗೆ ಸಾಗಿಸಿದ್ದಾರೆ.