ರೈತ ಮಹಿಳೆ ಹಳ್ಳಕ್ಕೆ ಬಿದ್ದು ಸಾವು

ಸುಳುಗೋಡು ಗ್ರಾಮ ಬಾಳೇಹಿತ್ಲುನಲ್ಲಿ ದುರ್ಘಟನೆ

ಕುಟುಂಬ ನಿರ್ವಹಣೆ ಮಾಡುತ್ತಿದ್ದ ರೈತ ಮಹಿಳೆ ಭವಾನಿ
ಭಾನುವಾರ ಬೆಳಗ್ಗೆ ತೋಟಕ್ಕೆಂದು ಹೋದ ರೈತ ಮಹಿಳೆ ಭವಾನಿ ಶಂಕರ್ ನಾರಾಯಣ(52) ಎಂಬುವವರು ಹಳ್ಳಕ್ಕೆ ಬಿದ್ದು ಸಾವನಪ್ಪಿರುವರುವ ದುರ್ಘಟನೆ ಸುಳುಗೋಡು ಗ್ರಾಮದಲ್ಲಿ ನಡೆದಿದೆ.
ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳುಗೋಡು ಗ್ರಾಮದ ಬಾಳೆಹಿತ್ಲು ಹಳ್ಳದಲ್ಲಿ ಭವಾನಿ ಅವರು ಎಂದಿನಂತೆ ಬೆಳಿಗ್ಗೆ ತೋಟಕ್ಕೆ ಹೋಗಿದ್ದರೆ.
ಸಂಜೆಯವರೆಗೂ ಮನೆಗೆ ಬಾರದಿದ್ದಾಗ ಕುಟುಂಬದವರು ಇವರನ್ನು ಹುಡುಕಲು ಪ್ರಾರಂಭಿಸಿದ್ದು ಎಷ್ಟೇ ಹುಡುಕಿದರೂ ಇವರ ಸುಳಿವು ಸಿಗಲಿಲ್ಲ. ತಡರಾತ್ರಿಯವರೆಗೂ ಹುಡುಕಿದಾಗ ರಾತ್ರಿ ಹನ್ನೊಂದರ ಸಮಯಕ್ಕೆ ಹಳ್ಳದಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಗ್ರಾಮ ಪಂಚಾಯತಿ ಸದಸ್ಯರಾದ ಅಣ್ಣಪ್ಪ ಹಾಗೂ ಗ್ರಾಮಸ್ಥರು ಮೃತದೇಹವನ್ನು 
ಮರಣೋತ್ತರ ಪರೀಕ್ಷೆಗೆ ಜೆಸಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಪತಿಯ ದೀರ್ಘಕಾಲದ ಅನಾರೋಗ್ಯದಿಂದ ಭವಾನಿ ಅವರು ಕುಟುಂಬದ ಆಧಾರ ಸ್ತಂಭವಾಗಿದ್ದರು. ಪತಿಯ ಅನಾರೋಗ್ಯದ ಕಾರಣದಿಂದ ತೋಟ, ಗದ್ದೆಯ ಕೆಲಸವನ್ನು ತಾವೇ ಮುಂದೆ ನಿಂತು ನೋಡಿಕೊಳ್ಳುತ್ತಿದ್ದರು. ಮೃತರಿಗೆ ಓರ್ವ ಪುತ್ರ ಇದ್ದಾರೆ.
ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post