ಬಿಜೆಪಿ ಕುಪ್ಪಳ್ಳಿ ಮಹಾಶಕ್ತಿ ಕೇಂದ್ರದ ಸಭೆ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಜನ್ಮದಿನ ಆಚರಣೆ
ಶಕ್ತಿಕೇಂದ್ರ ಪ್ರಮುಖರು ಸಭೆಯಲ್ಲಿ ಭಾಗಿ

ಬಿಜೆಪಿ ಸಂಸ್ಥಾಪಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ ಹಾಗೂ ಸ್ಮರಣೆ ಕಾರ್ಯಕ್ರಮ ಮಾಡುವ ಮೂಲಕ ಸಭೆ ಆರಂಭಿಸಲಾಯಿತು. ಈ ಸಭೆಯಲ್ಲಿ ಕುಪ್ಪಳ್ಳಿ ಮಹಾಶಕ್ತಿ ಕೇಂದ್ರದ ಮಹಿಳಾ ಪ್ರಮುಖ್ ಹಾಗೂ ಜಿಲ್ಲಾ ಕಾರ್ಯದರ್ಶಿ ರಮ್ಯ ಅನಿಲ್, ಕುಪ್ಪಳ್ಳಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ವಾಸುದೇವ್ ಹಾರೋಗೋಳಿಗೆ, ಶಕ್ತಿಕೇಂದ್ರ ಪ್ರಮುಖರಾದ ಮಹೇಶ್ ಹೆದ್ದೂರು, ಮುರುಳಿ ನಂಬಳ, ರವೀಂದ್ರ ಹೊಳೆಕೊಪ್ಪ, ಅಣ್ಣಪ್ಪ ಮೇಲಿನಕುರುವಳ್ಳಿ, ಪ್ರಮುಖರಾದ ಅನಿಲ್ ಮೇಲಿನಕುರುವಳ್ಳಿ, ಆದರ್ಶ ಮುತ್ತುಗುಂಡಿ, ವಿಷ್ಣು ಕೂಳೂರು ಹಾಜರಿದ್ದರು.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post