ಜವಳಿ ರಾಜೇಶ್ ವಿಧಿವಶ

ಸಮಾಜವಾದಿ ನಾಗೇಂದ್ರನಾಥ್‌ ಪುತ್ರ
ರಾಜೇಶ್‌ ಜವಳಿ ಇನ್ನಿಲ್ಲ
ಮೆದುಳಿನ ರಕ್ತಸ್ರಾವದಿಂದ ಸಾವು

ತೀರ್ಥಹಳ್ಳಿ  ತಾಲ್ಲೂಕಿನ ಗೌಡ ಸಾರಸ್ವತ ಸಮಾಜದ ಪ್ರಮುಖರು ಹಾಗು ಕೃಷಿಕರು ಆದ ಜವಳಿ ರಾಜೇಶ್ ಇವರು ಇಂದು ಸಂಜೆ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ತೀರ್ಥಹಳ್ಳಿ ತಾಲ್ಲೂಕಿನ ಹಿರಿಯ ಕೃಷಿಕರಾಗಿ, ಸಂಘ ಪರಿವಾರದ ಪ್ರಮುಖರಾಗಿ ಹಾಗು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ತುಂಗಾ ಮಹಾವಿದ್ಯಾಲಯದ ಸ್ಥಾಪಕ ಸದಸ್ಯರಾಗಿ ಹಲವಾರು ಕ್ಷೇತ್ರದ ಸಾಧಕರಾಗಿದ್ದ ಜವಳಿ ನಾಗೇಂದ್ರನಾಥ ಇವರ ಪುತ್ರರಾದ ಜವಳಿ ರಾಜೇಶ್ ಇವರು ತಮ್ಮ ಪದವಿ ವಿಧ್ಯಾಭ್ಯಾಸದ ನಂತರದಲ್ಲಿ ತಮ್ಮ ಕೌಟುಂಬಿಕ ಕೃಷಿ ಜೀವನಕ್ಕೆ ತಮ್ಮನ್ನು ತೊಡಗಿಸಿಕೊಂಡಿದ್ದರು. ಸದಾ ಹಸನ್ಮುಖಿಯಾಗಿ ತಮ್ಮಹೆಚ್ಚಿನ ಸಮಯವನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತಿದ್ದ ರಾಜೇಶ್ ಜವಳಿ ತಮ್ಮ ಸೌಮ್ಯ ಹಾಗು ಮುಗ್ದ ನಡವಳಿಕೆಯ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.ಕೆಲ ದಿನಗಳ ಹಿಂದೆ ಮೆದುಳು ರಕ್ತಸ್ರಾವಕ್ಕೊಳಗಾಗಿದ್ದ ಅವರು ಶಸ್ತಚಿಕಿತ್ಸೆ ಸಫಲವಾಗದೆ ಬುಧುವಾರ ಸಂಜೆ ವಿಧಿವಶರಾದರು ಎಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ , ಇಬ್ಬರು ಪುತ್ರರು, ಮೂವರು ಸಹೋದರಯರನ್ನು ಹೊಂದಿದ್ದ ರಾಜೇಶ್ ಜವಳಿ ಇವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.

ಬರಹ : ನವನೀತ್ ಮಕ್ಕಿಮನೆ ( 9481319601 )

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post