ಗೃಹಸಚಿವ ಆರಗ ಜ್ಞಾನೇಂದ್ರರ ರಾಜೀನಾಮೆಗೆ ಆಗ್ರಹ

ಶನಿವಾರ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ
ಕೊಲೆಗಾರರಿಗೆ ಜೈಲಿನಲ್ಲೇ ರಾಜಾತಿಥ್ಯ
ಹಿಂದೂಗಳಿಗೆ ರಕ್ಷಣೆ ನೀಡದ ಆರಗ ಜ್ಞಾನೇಂದ್ರ

ಹಿಂದುಗಳಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ನೀಡಬೇಕೆಂದು ಶನಿವಾರ ಶಿವಮೊಗ್ಗದಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ಹಮ್ಮಿಕೊಂಡಿದೆ. ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತದ ಸಹ ಸಂಯೋಜಕ ಸತೀಶ್ ದಾವಣಗೆರೆ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರಪ್ಪನ ಆಗ್ರಹಾರದಲ್ಲಿ ಹರ್ಷನ ಕೊಲೆ ಮಾಡಿದವರು ಮೊಬೈಲ್ ಬಳಸಿಕೊಂಡು ರಾಜ್ಯಾತಿಥ್ಯದಲ್ಲಿದ್ದಾರೆ. ಅವರಿಗೆ ಕಾನೂನಿನ ಭಯವೇ ಇಲ್ಲವಾಗಿದೆ. ಅಕಸ್ಮಾತ್‌ ಹೊರ ಬಂದರೆ ಅವರ ವರ್ತನೆ ಹೇಗೆ ಇರಬಹುದು ಎಂದು ಪ್ರಶ್ನೆ ಕಾಡುತ್ತಿದೆ ಎಂದು ಅವರು ಹೇಳಿದ್ದಾರಲ್ಲದೇ ಉತ್ತರ ಕರ್ನಾಟಕದಲ್ಲಿ ಹಿಂದೂಗಳ ಮೇಲೆ ಗೂಂಡಾಗಿರಿ ನಡೆದಿದೆ ಎಂದು ದೂರಿದರು.

ಕೊಲೆಯಾದ ಹರ್ಷನ ಅಕ್ಕ ಅಶ್ವಿನಿ ಮಾತನಾಡಿ, ನ್ನ ತಮ್ಮನ ಕೊಲೆಗಾರರಿಗೆ ಶಿಕ್ಷೆ ಆಗಬೇಕು. ಆಗಲೇ ನಮಗೆ ನೆಮ್ಮದಿ. ಆದರೆ, ಸರ್ಕಾರವೇ ನಮ್ಮನ್ನು‌ ನಿರ್ಲಕ್ಷಿಸಿದೆ. ಅಲ್ಲದೇ, ಓರ್ವ ಹೆಣ್ಣು ಮಗಳ ಜೊತೆ ಹೇಗೆ ಮಾತನಾಡಬೇಕೆಂಬ ಪರಿಜ್ಞಾನ‌ ಸಹ ಗೃಹ ಸಚಿವರಿಗೆ ಇಲ್ಲ ಎಂಬುದು ನೋವಿನ ಸಂಗತಿ ಎಂದು ಹೇಳಿದರು.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post