ಆಕರ್ಷ ರಾಜ್ ನಿಧನ


ಭಾನುವಾರ ರಾತ್ರಿಯಿಂದ ಕಾಣೆಯಾಗಿದ್ದ ಬಿಇ ಪದವೀಧರ ಕಟ್ಟೇಗದ್ದೆ ಆಕರ್ಷ ರಾಜ್ (26) ಮೃತದೇಹ ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುರ್ಗಾ ಕ್ರಾಸ್ ಸಮೀಪದ ಕೆರೆಯಲ್ಲಿ ಮುಂಜಾನೆ ಪತ್ತೆಯಾಗಿದೆ.

ಗುತ್ತಿಗೆದಾರ ಆಕರ್ಷ ರಾಜ್ ಬೆಂಗಳೂರಿನಲ್ಲಿ ಬಿಇ ಪದವಿ ಪಡೆದಿದ್ದರು. ಭಾನುವಾರ ಸಂಜೆ ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕವಲೇದುರ್ಗಾ ಹೋಗುವ ಮಾರ್ಗ ಮಧ್ಯೆ ದುರ್ಗಾ ಕ್ರಾಸ್ ಬಳಿ ಅವರು ತೆಗೆದುಕೊಂಡು ಹೋಗಿದ್ದ ಬ್ರಿಜ್ಜಾ ಕಾರು ವಿದ್ಯುತ್ ಕಂಬಕ್ಕೆ ತಗಲಿ ಅಪಘಾತವಾಗಿತ್ತು. ಅದೇ ದಿನ ಸಂಜೆಯಿಂದ ಆಕರ್ಷ ರಾಜ್ ಕಾಣೆಯಾಗಿದ್ದರು. ಮಂಗಳವಾರ ಬೆಳಿಗ್ಗೆ ಮೃತದೇಹ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಆದರೆ ಅದಕ್ಕೂ ಮೊದಲು ಕಾರು ಅಪಘಾತವಾದ ಸ್ಥಿತಿಯಲ್ಲಿಯೇ ಕಂಡು ಬಂದಿರುವುದು ಹಲವು ಅನುಮಾನಕ್ಕೂ ಕಾರಣವಾಗಿದೆ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ಆಕರ್ಷ ರಾಜ್  ಹಿರಿಯ ಸಹಕಾರಿ ಧುರೀಣ, ತೀರ್ಥಹಳ್ಳಿ ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಕಟ್ಟೇಗದ್ದೆ ಹಾಲಪ್ಪ ದಂಪತಿಯ ದ್ವಿತೀಯ ಪುತ್ರ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post