ಮನೆ ಕುಸಿತ ಪ್ರಾಣಾಪಾಯದಿಂದ ಪಾರು

ಸ್ಥಳಕ್ಕೆ ಆರ್‌.ಎಂ. ಮಂಜುನಾಥ ಗೌಡ ಭೇಟಿ
ನೆರವಿನ ಭರವಸೆ ನೀಡಿದ ಮುಖಂಡರು

ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದಾಗಿ ಮನೆ ಕುಸಿತ ಸಂಭವಿಸಿದೆ. ಅದೃಷ್ಟವಶಾತ್‌ ಮುನ್ಸೂಚನೆ ದೊರಕಿದ ಕಾರಣ ಮನೆಯಲ್ಲಿದ್ದವರು ಹೊರಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದು ನಳಿನಿ ಇಂಗ್ಲಾದಿ ಎಂಬುವವರ ಮನೆಯಾಗಿದ್ದು ಅವರ ಓರ್ವ ಪುತ್ರ ವಿಕಲಚೇತನನಾಗಿದ್ದಾನೆ. ಕುಟುಂಬ ಕಡು ಬಡತನದಲ್ಲಿ ಜೀವಿಸುತ್ತಿದೆ. ಸುದ್ದಿ ತಿಳಿದಾಕ್ಷಣ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಹಾಗೂ ಮಾಜಿ ಜಿ.ಪಂ. ಸದಸ್ಯ ಹಾರೋಗೊಳಿಗೆ ಪದ್ಮನಾಭ್‌ ಸ್ಥಳಕ್ಕೆ ಧಾವಿಸಿ ನೆರವಿನ ಭರವಸೆ ನೀಡಿದರಲ್ಲದೇ ತಕ್ಷಣವೇ ತೀರ್ಥಹಳ್ಳಿ ತಹಶೀಲ್ದಾರ್‌ ಅಮೃತ್‌ ಅತ್ರೇಶ್‌ ಅವರ ಗಮನಕ್ಕೆ ತಂದು ಸರ್ಕಾರದಿಂದ ಸೂಕ್ತ ನೆರವು ದೊರಕಿಸಿಕೊಡಲು ಕೋರಿದ್ದಾರೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post