ಮಹಾಮಳೆಗೆ ಕೊಚ್ಚಿಹೋದ ರಾಜ್ಯ ಹೆದ್ದಾರಿ

ಶೃಂಗೇರಿ-ಆಗುಂಬೆ-ತೀರ್ಥಹಳ್ಳಿ ರಸ್ತೆ ಸಂಪರ್ಕ ಕಡಿತ

ಕಳೆದ ಕೆಲವು ದಿನಗಳಿಂದ ಮಲೆನಾಡು ಭಾಗದಲ್ಲಿ ಅಬ್ಬರಿಸುತ್ತಿರುವ ಭಾರೀ ಮಳೆಯಿಂದಾಗಿ ದಿನಕ್ಕೊಂದು ಅವಘಡಗಳು ಸಂಭವಿಸುತ್ತಿವೆ. ಧಾರಾಕಾರ ಮಳೆಗೆ ಶೃಂಗೇರಿ- ಆಗುಂಬೆ- ತೀರ್ಥಹಳ್ಳಿ ಮಾರ್ಗದ ನೇರಳೆಕೂಡಿಗೆ ಬಳಿ ರಸ್ತೆ ಕುಸಿದು ಸಂಚಾರ ಸಂಪೂರ್ಣ ಬಂದ್ ಆಗಿದೆ.

ಮಳೆಯಿಂದಾಗಿ ಸುಮಾರು 200 ಅಡಿಗಳಷ್ಟು ರಸ್ತೆ ಕೊಚ್ಚಿ ಹೋಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದರಿಂದಾಗಿ ಶೃಂಗೇರಿ- ಆಗುಂಬೆ ಮಾರ್ಗದ ಸಂಚಾರ ಸಂಪೂರ್ಣ ತಪ್ಪಿಹೋಗಿದೆ.

ಬದಲಿ ಮಾರ್ಗ ವಿವರ:

ಈ ಮಾರ್ಗದ ಬದಲಿಯಾಗಿ ಶೃಂಗೇರಿ - ಕೆಲ್ಲಾರ್ - ಮೀಗಾ ಮಾರ್ಗವಾಗಿ ಬೇಗಾರ್ ಮೂಲಕ ಆಗುಂಬೆ ಅಥವಾ ಶೃಂಗೇರಿ - ಕಾವಡಿ - ಬಿಲಗದ್ದೆ - ಶಾನುವಳ್ಳಿ - ಮಾವಿನಕಟ್ಟೆ - ಬೇಗಾರ್ ಮಾರ್ಗವಾಗಿ ಆಗುಂಬೆ ಗೆ ಸಂಚರಿಸಲು ಸೂಚಿಸಲಾಗಿದೆ.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post