ತೀರ್ಥಹಳ್ಳಿ ಬಿಜೆಪಿ ಕಚೇರಿಯಲ್ಲಿ
ಬೆಳಿಗ್ಗಿನಿಂದ ಹಾರದ ರಾಷ್ಟ್ರಧ್ವಜ
ಸುದ್ದಿ ಭಯದಲ್ಲಿ ತಕ್ಷಣ ಎಚ್ಚೆತ್ತ
ಮುಖಂಡ ಕಾಸರವಳ್ಳಿ ಶ್ರೀನಿವಾಸ್
ಬಿಇಓ ಕಚೇರಿಯಲ್ಲಿ ರಾಷ್ಟ್ರಧ್ವಜಕ್ಕೆ
ಅವಮಾನ
ಸುದ್ದಿ ಭಯದಲ್ಲಿ ತಕ್ಷಣ ಎಚ್ಚೆತ್ತ ಮುಖಂಡ ಕಾಸರವಳ್ಳಿ ಶ್ರೀನಿವಾಸ್
ತೀರ್ಥಹಳ್ಳಿ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸದ ಛಾಯಚಿತ್ರ ತೆಗೆಯುವ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಬಿಜೆಪಿ ಮುಖಂಡ ಕಾಸರವಳ್ಳಿ ಶ್ರೀನಿವಾಸ್ ನೆಲದ ಧ್ವನಿಗೆ ಎದುರಾಗಿದ್ದರು. ಈ ಸಂದರ್ಭ ಅವರು ಮಾತನಾಡಿ, ಮೂರು ದಿನದದಲ್ಲಿ ಯಾವಾಗ ಬೇಕಾದರೂ ರಾಷ್ಟ್ರಧ್ವಜ ಹಾರಿಸಬಹುದು. ಅದಕ್ಕೆ ಸಮಯದ ಮಿತಿ ಇಲ್ಲ ಎಂಬ ಸ್ಪಷ್ಟನೆ ನೀಡಿದರು. ಬಿಜೆಪಿ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸದ ಸಂಗತಿ ಸುದ್ದಿಯಾಗಿ ಪ್ರಕಟವಾಗುತ್ತದೆ ಎಂಬ ವಿಷಯ ಖಚಿತವಾಗುತ್ತಿದ್ದಂತೆ ಎಚ್ಚೆತ್ತ ಬಿಜೆಪಿ ಜಿಲ್ಲಾ ಎಸ್ಸಿ, ಎಸ್ಟಿ ಮೋರ್ಚಾ ಅಧ್ಯಕ್ಷ ಕಾಸರವಳ್ಳಿ ಶ್ರೀನಿವಾಸ್ ಬಿಜೆಪಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ದೇವಂಗಿಯ ಕಾರ್ಯಕ್ರಮವೊಂದರಲ್ಲಿ ನಿರತರಾಗಿದ್ದು ಅವರ ಅನುಪಸ್ಥಿತಿಯಲ್ಲಿ ರಾಷ್ಟ್ರಧ್ವಜವನ್ನು ತಕ್ಷಣ ಕಚೇರಿ ಮೇಲೆ ಹಾರಿಸಿ ರಾಷ್ಟ್ರಪ್ರೇಮ ಮೆರೆದಿದ್ದಾರೆ.
ರಾಷ್ಟ್ರಧ್ವಜ ನೀತಿ ಸಂಹಿತೆ ನಿಯಮಗಳನ್ನ ಉಲ್ಲಂಘಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಟ್ಟಡದಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಗೃಹಸಚಿವ ಆರಗ ಜ್ಞಾನೇಂದ್ರ ಸ್ವಕ್ಷೇತ್ರದಲ್ಲಿ ರಾಷ್ಟ್ರಧ್ವಜಕ್ಕೆ ಗೆಜೆಟೆಡ್ ಹುದ್ದೆಯ ಸ್ಥಾನಮಾನ ಹೊಂದಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಅವಮಾನಕಾರಿಯಾಗಿ ನಡವಳಿಕೆ ತೋರಿರುವುದು ಆಡಳಿತಕ್ಕೆ ಮುಜುಗರ ತಂದಿದೆ.
ಸ್ವಾತಂತ್ರ್ಯದ 75ನೇ ವರ್ಷದ ಆಚರಣೆ ಹಿನ್ನಲೆಯಲ್ಲಿ ಪ್ರತಿ ಮನೆ, ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಹಾರಿಸಿ ಸಂಭ್ರಮದಲ್ಲಿ ಪಾಲ್ಗೊಳ್ಳಬೇಕೆಂಬ ಕಾರಣಕ್ಕೆ ಹರ್ ಘರ್ ತಿರಂಗ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ರಾಷ್ಟ್ರಧ್ವಜವನ್ನು ಕೇವಲ ಮೂರು ಅಡಿ ಎತ್ತರದಲ್ಲಿ ಹಾರಿಸಿ ಧ್ವಜಕ್ಕೆ ಅವಮಾನ ಮಾಡಲಾಗಿದೆ. ಈ ವಿಷಯ ಬಹಿರಂಗವಾಗುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಮೌನಕ್ಕೆ ಜಾರಿದ್ದಾರೆ.
ಶಿಕ್ಷಣಾಧಿಕಾರಿ ಕಚೇರಿ ಕಟ್ಟಡ
ನೂತನವಾಗಿ ನಿರ್ಮಾಣಗೊಂಡಿದ್ದು ಧ್ವಜಸ್ತಂಬ ಇಲ್ಲವಾಗಿದೆ. ಕಟ್ಟಡದ ಮೇಲ್ಛಾವಣಿಯ ಮೊಂಡು ಪಿಲ್ಲರ್ಗೆ
ಮೂರಡಿ ಉದ್ದದ ಕೋಲು ಕಟ್ಟಿ ರಾಷ್ಟ್ರಧ್ವಜ ಹಾರಿಸಿರುವ ಬೇಜಾವಾಬ್ದಾರಿ ಈಗ ಸಾರ್ವಜನಿಕವಾಗಿ ಆಕ್ರೋಶಕ್ಕೆ
ಗುರಿಯಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಕ್ರಿಮಿನಲ್
ಪ್ರಕರಣ ದಾಖಲಿಸಬೇಕೆಂಬ ಆಗ್ರಹ ಸಾರ್ವಜನಿಕವಾಗಿ ಕೇಳಿ ಬಂದಿದೆ.