ಆಯತಪ್ಪಿಬಿದ್ದು ಬೈಕ್‌ ಸವಾರ ಸಾವು

ಶಿವಮೊಗ್ಗ ಗಾಂಧಿಬಜಾರ್‌ ಗಿರೀಶ್ ನಿಧನ
ಮಂಡಗದ್ದೆ ಸಮೀಪದ 15ನೇ ಮೈಲಿಕಲ್ಲಿನಲ್ಲಿ ಘಟನೆ

ಶಿವಮೊಗ್ಗ - ತೀರ್ಥಹಳ್ಳಿ ಮಾರ್ಗ ಮಧ್ಯೆಯ 15ನೇ ಮೈಲಿಕಲ್ಲು ಸಮೀಪ ಶಿವಮೊಗ್ಗ ಗಾಂಧಿ ಬಜಾರ್‌ 4ನೇ ತಿರುವಿನ ವಾಸಿ ಗಿರೀಶ್ (30) ಬುಧವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಿರೀಶ್ ಮಂಡಗದ್ದೆ ಹೋಟೆಲ್‌ನಲ್ಲಿ ಊಟ ಮಾಡಿ ವಾಪಾಸ್ಸು ತೆರಳುವಾಗ ರಾಷ್ಟ್ರೀಯ ಹೆದ್ದಾರಿ 169ರ ಮಾರ್ಗ ಘಟನೆ ಸಂಭವಿಸಿದೆ.

15ನೇ ಮೈಲಿಕಲ್ಲು ಸಮೀಪ ಖಾಸಗಿ ಬಸ್‌ ಕಂಡ ಹೇಮಂತ್‌ ಗಲಿಬಿಲಿಗೊಂಡಿದ್ದಾರೆ. ಬಸ್‌ ಮೈಮೇಲೆ ಅಪ್ಪಳಿಸಬಹದು ಎಂಬ ಭಯದಲ್ಲಿ ಬೈಕಿನಿಂದ ಕೆಳಗೆ ಬಿದ್ದು ತೊಡೆಗೆ ತೀವ್ರ ಪೆಟ್ಟಾಗಿ ಮೃತಪಟ್ಟಿದ್ದಾರೆ. ಗಿರೀಶ್ ಶಿವಮೊಗ್ಗದಲ್ಲಿ ಜಿಮ್‌ ನಡೆಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post