ಕನ್ನಂಗಿ ರೇಬೀಸ್‌ ಲಸಿಕಾ ಜಾಗೃತಿ

ಲಯನ್ಸ್‌ ಕ್ಲಬ್‌ ಸಹಕಾರದಲ್ಲಿ ನಡೆದ ಶಿಬಿರ
ರಕ್ತದಾನ
, ನೇತ್ರ ಪರೀಕ್ಷೆ, ಶಸ್ತ್ರಚಿಕಿತ್ಸೆಗೆ ಉತ್ತಮ ಸ್ಪಂದನೆ

ತೀರ್ಥಹಳ್ಳಿ ತಾಲ್ಲೂಕಿನ ಕನ್ನಂಗಿಯಲ್ಲಿ ಲಯನ್ಸ್‌, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಪಶು ಆಸ್ಪತ್ರೆ, ಗ್ರಾಮ ಪಂಚಾಯಿತಿ, ಕೃಷಿ ಪತ್ತಿನ ಸಹಕಾರದೊಂದಿಗೆ ಬುಧವಾರ ನಡೆದ ರೇಬಿಸ್‌ ಲಸಿಕಾ ಜಾಗೃತಿ, ರಕ್ತದಾನ, ನೇತ್ರಪರೀಕ್ಷೆ, ಶಸ್ತ್ರಚಿಕಿತ್ಸಾ ಶಿಬಿರ ಅತ್ಯಂತ ಯಶಸ್ವಿಯಾಯಿತು.

ಈ ಕಾರ್ಯಕ್ರಮದಲ್ಲಿ 40 ಶ್ವಾನಗಳಿಗೆ ಉಚಿತವಾಗಿ ಲಸಿಕೆ ನೀಡಲಾಯಿತು. 28 ಯೂನಿಟ್ ರಕ್ತ ಸಂಗ್ರಹಿಸಲಾಯಿತು. 90 ಜನರ ನೇತ್ರ ತಪಾಸಣೆ ನಡೆಸಿದ್ದು, ಶಸ್ತ್ರಚಿಕಿತ್ಸೆ ಅವಶ್ಯಕತೆ ಇರುವ  25 ಜನರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡುವ ಜವಾಬ್ದಾರಿಯನ್ನು ಲಯನ್ಸ್‌ ಕ್ಲಬ್‌ ನಿರ್ವಹಿಸುತ್ತಿದೆ.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಅಶೋಕ್ ಕುಡುವಳ್ಳಿ, ಖಜಾಂಚಿ ಕನ್ನಂಗಿ ಶೇಷಾದ್ರಿ, ಶ್ರೀ ವಿನಾಯಕ ಯುವಕ ಸಂಘದ ಅಧ್ಯಕ್ಷ ಗಿರೀಶ್ ಕನ್ನಂಗಿ, ಪಶುವೈದ್ಯರಾದ ಡಾ.ಪ್ರವೀಣ್, ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರು, ವೈದ್ಯಾದಿಕಾರಿಗಳು, ಹಲವು ಸಂಘ ಸಂಸ್ಥೆಗಳ ಪದಾದಿಕಾರಿಗಳು, ಸ್ಥಳೀಯರು, ಲಯನ್ಸ್ ಸದಸ್ಯರು ಭಾಗವಹಿಸಿದ್ದರು.

ನೆಲದ ಧ್ವನಿ

ಆತ್ಮೀಯರೇ. ಕಲೆ, ಸಾಹಿತ್ಯ, ಚಳವಳಿ,ರಾಜಕೀಯ ಸಾಮಾಜಿಕ ಕ್ರಾಂತಿಗೆ ತನ್ನದೇ ಕೊಡುಗೆ ನೀಡಿದ ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ 2008ರಲ್ಲಿ ಆರಂಭಗೊಂಡ “ನೆಲದ ಧ್ವನಿ” ದಿನ ಪತ್ರಿಕೆ ತನ್ನದೇ ಆದ ಛಾಪು ಮೂಡಿಸಿದೆ. ಜನ ಜಾಗೃತಿಗಾಗಿ, ಸಮಾಜದಲ್ಲಿನ ಮೌಡ್ಯ, ಕಂದಾಚಾರ, ದುರಾಡಳಿತ ಖಂಡನೆ, ಭ್ರಷ್ಟಾಚಾರ ನಿವಾರಣೆ ಸೇರಿದಂತೆ ಒಂದು ಸ್ವಸ್ಥ ಸಮಾಜ ಕಟ್ಟಲು ಬೇಕಾದ ಜಾಗೃತ ಮಾಹಿತಿ ನೀಡುವ ಮೂಲಕ ಸಮಾಜದ ಏಳಿಗೆಗೆ ಜನರನ್ನು ಎಚ್ಚರಿಸುವ ಕೆಲಸದಲ್ಲಿ “ನೆಲದ ಧ್ವನಿ ಪತ್ರಿಕೆ” ಪರಿಣಾಮಕಾರಿ ಪಾತ್ರ ನಿರ್ವಹಿಸಿತ್ತು. ಇದು ಬದಲಾವಣೆಯ ಸಮಯ. ಕಾಲಕ್ಕೆ ತಕ್ಕ ಹಾಗೆ ಹೆಜ್ಜೆ ಹಾಕುವ ನಿಟ್ಟಿನಲ್ಲಿ ನೆಲದ ಧ್ವನಿ ಈಗ ಈ ಪತ್ರಿಕೆಯಾಗಿ ನಿಮ್ಮನ್ನು ತಲುಪಲಿದೆ. ಇದರ ಹಿಂದೆ ಯಾವುದೇ ಅಜೆಂಡಾ ಇಲ್ಲವೆಂದು ಸ್ವಷ್ಟಪಡಿಸುತ್ತೇವೆ. ತಾಲ್ಲೂಕು ಕೇಂದ್ರದ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಓದುಗರಿಗೆ ಶೀಘ್ರ, ನಿಖರವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಮ್ಮ ಬಳಗದ್ದು. ನಮ್ಮ ಪ್ರಯತ್ನಕ್ಕೆ ನಿಮ್ಮ ಹೃತ್ಪೂರ್ವಕ ಬೆಂಬಲ ಇರುತ್ತದೆ ಎಂಬುದು ನಮ್ಮ ಅಚಲ ನಂಬಿಕೆ. -ನೆಲದ ಧ್ವನಿ ಬಳಗ

Post a Comment

Previous Post Next Post