ಲಯನ್ಸ್ ಕ್ಲಬ್ ಸಹಕಾರದಲ್ಲಿ ನಡೆದ ಶಿಬಿರ
ರಕ್ತದಾನ, ನೇತ್ರ ಪರೀಕ್ಷೆ, ಶಸ್ತ್ರಚಿಕಿತ್ಸೆಗೆ
ಉತ್ತಮ ಸ್ಪಂದನೆ
ತೀರ್ಥಹಳ್ಳಿ ತಾಲ್ಲೂಕಿನ ಕನ್ನಂಗಿಯಲ್ಲಿ ಲಯನ್ಸ್, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಪಶು ಆಸ್ಪತ್ರೆ, ಗ್ರಾಮ ಪಂಚಾಯಿತಿ, ಕೃಷಿ ಪತ್ತಿನ ಸಹಕಾರದೊಂದಿಗೆ ಬುಧವಾರ ನಡೆದ ರೇಬಿಸ್ ಲಸಿಕಾ ಜಾಗೃತಿ, ರಕ್ತದಾನ, ನೇತ್ರಪರೀಕ್ಷೆ, ಶಸ್ತ್ರಚಿಕಿತ್ಸಾ ಶಿಬಿರ ಅತ್ಯಂತ ಯಶಸ್ವಿಯಾಯಿತು.
ಈ ಕಾರ್ಯಕ್ರಮದಲ್ಲಿ 40 ಶ್ವಾನಗಳಿಗೆ ಉಚಿತವಾಗಿ ಲಸಿಕೆ ನೀಡಲಾಯಿತು. 28 ಯೂನಿಟ್ ರಕ್ತ ಸಂಗ್ರಹಿಸಲಾಯಿತು. 90 ಜನರ ನೇತ್ರ ತಪಾಸಣೆ ನಡೆಸಿದ್ದು, ಶಸ್ತ್ರಚಿಕಿತ್ಸೆ ಅವಶ್ಯಕತೆ ಇರುವ 25 ಜನರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡುವ ಜವಾಬ್ದಾರಿಯನ್ನು ಲಯನ್ಸ್ ಕ್ಲಬ್ ನಿರ್ವಹಿಸುತ್ತಿದೆ.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಅಶೋಕ್ ಕುಡುವಳ್ಳಿ, ಖಜಾಂಚಿ ಕನ್ನಂಗಿ ಶೇಷಾದ್ರಿ, ಶ್ರೀ ವಿನಾಯಕ ಯುವಕ ಸಂಘದ ಅಧ್ಯಕ್ಷ ಗಿರೀಶ್ ಕನ್ನಂಗಿ, ಪಶುವೈದ್ಯರಾದ ಡಾ.ಪ್ರವೀಣ್, ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರು, ವೈದ್ಯಾದಿಕಾರಿಗಳು, ಹಲವು ಸಂಘ ಸಂಸ್ಥೆಗಳ ಪದಾದಿಕಾರಿಗಳು, ಸ್ಥಳೀಯರು, ಲಯನ್ಸ್ ಸದಸ್ಯರು ಭಾಗವಹಿಸಿದ್ದರು.