ಸಾಗರ ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತ ಸಾವು
ರಸ್ತೆ ಅಪಘಾತದಲ್ಲಿ ತ್ಯಾಗರ್ತಿ ರಮೇಶ್ ನಿಧನ
ಚಿತ್ರದುರ್ಗದ ಹಿರಿಯೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ದುರಂತ ಸಂಭವಿಸಿದೆ. 'ಭಾರತ್ ಜೋಡೋ' ಪಾದಯಾತ್ರೆಗೆ ತೆರಳಿದ್ದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತ್ಯಾಗರ್ತಿ ರಮೇಶ್ (62) ರಸ್ತೆ ಅಪಘಾತದಲ್ಲಿ ಸೋಮವಾರ ಮೃತಪಟ್ಟಿದ್ದಾರೆ.
ಸಾಗರದ ಕಾಂಗ್ರೆಸ್ ಕಾರ್ಯಕರ್ತರ ತಂಡದೊಂದಿಗೆ ಆಗಮಿಸಿದ್ದ ರಮೇಶ್ ಪಾದಯಾತ್ರೆ ಮುಗಿಸಿ ವಾಪಸ್ ತೆರಳುವಾಗ ಕ್ಯಾಂಟರ್ ಟಿವಿ ಸರ್ಕಲ್ ಸಮೀಪ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಿರಿಯೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ. ಸ್ಥಳಕ್ಕೆ ತೀರ್ಥಹಳ್ಳಿಯ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ ಗೌಡ, ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.