ದೇವದುರ್ಗ ತಾಲ್ಲೂಕಿನಲ್ಲಿ 14 ವರ್ಷ ಸುಧೀರ್ಘ
ಸೇವೆ
ಶಿಕ್ಷಕರ ದಿನಾಚರಣೆಯಲ್ಲಿ ಸಂದ ಗೌರವ
ತೀರ್ಥಹಳ್ಳಿ ತಾಲ್ಲೂಕಿನ ಪುಟ್ಟೋಡ್ಲು ಗ್ರಾಮದ ಶಿಕ್ಷಕಿ ಪುಷ್ಪಾವತಿ ಬಿ.ಈ. ಅವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ. ಸುಮಾರು 14 ವರ್ಷಗಳಿಂದ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ವೃತ್ತಿ ನಿರ್ವಹಿಸುತ್ತಿದ್ದಾರೆ. ಇವರು ವೃತ್ತಿ ಜೀವನದಲ್ಲಿ ನಡೆಸಿರುವ ವಿದ್ಯಾರ್ಥಿ ಸ್ನೇಹಿ ಭೋದನಾ ಕ್ರಮವನ್ನು ಅನುಸರಿಸಿದ್ದಾರೆ. ಇವರ ಸೇವೆಯನ್ನು ಗಮನಿಸಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಡೆದ ಸಮಾರಂಭದಲ್ಲಿ 2022-23ನೇ ಸಾಲಿನ ಉತ್ತಮ ಶಿಕ್ಷಕಿ ಎಂದು ಪ್ರಶಸ್ತಿ ನೀಡಿ ಗೌರವಿಸಲಾಗಿದೆ.