ಕುವೆಂಪು ಹೆಸರಿನಲ್ಲಿ ಮೈಸೂರು-ತಾಳಗುಪ್ಪ ರೈಲು
ಆದೇಶ ಹೊರಡಿಸಿದ ರೈಲ್ವೆ ಮಂಡಳಿಯ ಉಪ ನಿರ್ದೇಶಕ ರಾಜೇಶ್ ಕುಮಾರ್
ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರು ಇನ್ನು ಮುಂದೆ ಕುವೆಂಪು ಎಕ್ಸ್ಪ್ರೆಸ್ ಆಗಲಿದೆ. ಇದೇ ಮೊದಲ ಬಾರಿಗೆ ಕುವೆಂಪು ಹೆಸರನ್ನು ರೈಲಿಗೆ ಇಡಲಾಗಿದೆ.ಇದೇ ವೇಳೆ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್ ಪ್ರೆಸ್ ಎಂದು ರೈಲ್ವೆ ಇಲಾಖೆ ಮರುನಾಮಕರಣ ಮಾಡಿದೆ.ಮೈಸೂರು ಮತ್ತು ಕೊಡಗು ಸಂಸದ ಪ್ರತಾಪ್ ಸಿಂಹ ಕೇಂದ್ರ ರೈಲ್ವೆ ಸಚಿವರಿಗೆ ಮಾಡಿದ ಮನವಿ ಹಿನ್ನೆಲೆಯಲ್ಲಿ ಟಿಪ್ಪು ಎಕ್ಸ್ ಪ್ರೆಸ್ ಹೆಸರು ಬದಲಾಯಿಸಲಾಗಿದೆ.ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಜುಲೈ 25ರಂದು ಸಂಸದ ಪ್ರತಾಪ್ ಸಿಂಹ ಪತ್ರ ಬರೆದಿದ್ದರು. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮನವಿಗೆ ಸ್ಪಂದಿಸಿದ್ದರು.
ಕುವೆಂಪು ಹೆಸರು ಸೇರಿಸಿ ಟಿಪ್ಪು ಹೆಸರು ಕೈಬಿಟ್ಟಿರುವುದು ವಿರೋಧ ಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ. ರಾಷ್ಟ್ರಕವಿ ಕುವೆಂಪು ಹೆಸರನ್ನು ಸೇರ್ಪಡೆ ಮಾಡಲಾಗಿದ್ದರೆ, ಇನ್ನೊಂದು ಕಡೆಯಲ್ಲಿ ಓರ್ವ ಮಹಾನ್ ಕ್ರಾಂತಿಕಾರಿ, ಸಮಾಜ ಸುಧಾರಣೆಯ ಹರಿಕಾರ, ಬ್ರಿಟೀಷರಿಗೆ ಸಿಂಹಸ್ವಪ್ನವಾಗಿ ಕಾಡಿದ್ದ ಟಿಪ್ಪು ಸುಲ್ತಾನ್ ಹೆಸರು ಬಿಟ್ಟಿರುವುದು ಆಕ್ರೋಶಕ್ಕೆ ಕಾರಣವಾಗಿದೆ.