ಖ್ಯಾತ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ನೇತೃತ್ವದಲ್ಲಿ ಆರಂಭಗೊಂಡಿರುವ ವಿಸ್ತಾರ ನ್ಯೂಸ್ ಚಾನಲ್ "ವಿಸ್ತಾರ ಕನ್ನಡ ಸಂಭ್ರಮ" ಕಾರ್ಯಕ್ರಮ ನವೆಂಬರ್ 12ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬಂಟರ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದೊಂದಿಗೆ ನಡೆಯಲಿದೆ.
ಕಾರ್ಯಕ್ರಮವನ್ನು ಗೃಹಸಚಿವ ಆರಗ ಜ್ಞಾನೇಂದ್ರ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಪಟ್ಣಣ ಪಂಚಾಯಿತಿ ಅಧ್ಯಕ್ಷೆ ಸುಶೀಲ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಶಿವಮೊಗ್ಗ ಡಿಸಿಸಿ ಹಾಗೂ ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಡಾ.ಆರ್.ಎಂ.ಮಂಜುನಾಥ ಗೌಡ, ಜೆಡಿಎಸ್ ಮುಖಂಡರಾದ ರಾಜಾರಾಂ ಯಡೂರು, ಬಂಟರ ಸಂಘದ ಅಧ್ಯಕ್ಷರಾದ ಪ್ರಭಾಕರ್ ಹೆಗ್ಡೆ, ತಾಲ್ಲೂಕು ಕಸಾಪ ಅಧ್ಯಕ್ಷರಾದ ಟಿ.ಕೆ. ರಮೇಶ್ ಶೆಟ್ಟಿ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘಧ ಅಧ್ಯಕ್ಷರಾದ ಡಾನ್ ರಾಮಣ್ಣ ವಹಿಸಲಿದ್ದಾರೆ.
ಜಿಲ್ಲಾ ಬ್ಯೂರೋ ಮುಖ್ಯಸ್ತರಾದ ವಿವೇಕ್ ಮಹಾಲೆ, ಹಾಗೂ ವಿಸ್ತಾರ ಬಳಗ ಹಾರ್ದಿಕವಾಗಿ ಸ್ವಾಗತಿಸಿದೆ.